🌞 *ರಥಸಪ್ತಮಿ* 🌞
=========================
🌞ಮಾಘ ಮಾಸ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು *ಸೂರ್ಯನ ಜನ್ಮದಿನ*.
🌞ಅಲ್ಲದೇ ಸಪ್ತಮಿ ತಿಥಿಯ ಅದಿದೇವತೆಯು ಸೂರ್ಯನೇ ಆಗಿರುವುದರಿಂದ,
*ಇದೇ ಫೆಬ್ರವರಿ ೩ ಶುಕ್ರವಾರ ದಂದು ಸೂರ್ಯ ಆರಾಧನೆಯ ರಥಸಪ್ತಮಿ* ದಿನವೆಂದು ಆಚರಿಸಲಾಗುತ್ತದೆ. 🌞ನಿಯಮಬದ್ಧವಾದ ಉದಯ ಹಾಗೂ ಅಸ್ತಗಳ ಮೂಲಕ ನಮಗೆ ಶಿಸ್ತು ಬದ್ಧವಾದ ಕರ್ತವ್ಯ ಪ್ರಜ್ಞೆಯನ್ನು, ಚೈತನ್ಯವನ್ನು ತುಂಬುವ ಸೂರ್ಯನ ಪೂಜೆಯೇ ಈ ದಿವಸದ ಮುಖ್ಯ ಆಚರಣೆಯಾಗಿದೆ. ಈ ದಿನದಲ್ಲಿ ನಡೆಯುವ ಕೆಲಸ ಕಾರ್ಯಗಳು, ಕೋರಿಕೆಗಳು ಫಲಪ್ರದವಾಗಿರುತ್ತವೆ. ಸೂರ್ಯನ ಪ್ರಕಾಶ ಹೆಚ್ಚುತ್ತಿರುವುದರಿಂದ ಚಳಿಗಾಲದ ಚಳಿ ಮುದುಡಿಕೊಂಡು ಮೈಯಲ್ಲಿ ನವಚೇತನ ತುಂಬಿದಂತೆನಿಸುತ್ತದೆ. ಅಂಗಾಂಗಗಳಲ್ಲಿ ಕಾರ್ಯಕ್ಷಮವಾಗುತ್ತಿವೆ. ಈ ಉಪಕಾರಕ್ಕಾಗಿ ಸೂರ್ಯನನ್ನು ಪೂಜಿಸುವುದು ರೂಡಿಯಲ್ಲಿದೆ.
🌞ಆಹಾರಕ್ಕಾಗಿ, ರೋಗ ನಿವಾರಣೆಗಾಗಿ ಸೂರ್ಯೋಪಾಸನೆ ಮಾಡಬೇಕೆಂದು ಸ್ಕಂದ, ವರಾಹ ಪುರಾಣಗಳಲ್ಲಿ ಹೇಳಿದೆ. ವೈವಸ್ವತ ಮನ್ವಂತರದ ಆರಂಭದ ದಿನ. ಸೂರ್ಯನು ಉತ್ತರಾಯಣನಾಗಿ ಸಪ್ತಾಶ್ವಗಳ ರಥವನ್ನೇರಿ, ಉತ್ತರದಿಕ್ಕಿನ ಮಾರ್ಗದಲ್ಲಿ ಹೊರಟ ದಿನ.
🌞 *ರಥಸಪ್ತಮಿ* ದಿವಸ ರೋಗ ನಿವಾರಣೆಯನ್ನು, ದೇಹದಾರ್ಢ್ಯ ಹಾಗೂ ಆರೋಗ್ಯವನ್ನು ಬಯಸುವವರು ಸೂರ್ಯನ ಆರಾಧನೆ ಮಾಡಬೇಕೆಂಬ ನಿಯಮವಿದೆ. ರೋಗಾಣುಗಳನ್ನು ನಾಶ ಪಡಿಸುವ ಶಕ್ತಿ ಸೂರ್ಯನ ಕಿರಣಗಳಲ್ಲಿವೆ. ಬೆಳಗಿನ ಹಾಗೂ ಸಂಜೆಯ ಸೂರ್ಯ ಕಿರಣಗಳಿಂದ ಆರೋಗ್ಯ ವರ್ಧನೆಯಾಗುತ್ತದೆ. ರೋಗದಿಂದ ನರಳುವವರು ಈ ದಿವಸ ಸೂರ್ಯಾರಾಧನೆಯನ್ನು ಮಾಡಿದರೆ ಬೇಗ ಗುಣಹೊಂದುತ್ತಾರೆ.
🌞ಯೋಗಾಸನಗಳಲ್ಲಿ ಮೊದಲ ಪ್ರಾಶಸ್ತ್ಯ *ಸೂರ್ಯ ನಮಸ್ಕಾರ*ಕ್ಕೆ ನೀಡಬಹುದು. ಏಕೆಂದರೆ ಈ ಅಭ್ಯಾಸವು ಮನಸ್ಸು, ದೇಹ ಮತ್ತು ಉಸಿರಾಟ ವ್ಯವಸ್ಥೆಗಳಿಗೆ ವಿಶೇಷವಾಗಿ ಪರಿಣಾಮಕಾರಿಯಾಗಿದೆ. ಭೂಮಿಯಲ್ಲಿನ ಸಕಲ ಜೀವರಾಶಿಗಳ ಚಟುವಟಿಕೆಗಳು ಸೂರ್ಯನಿಂದ ನಡೆಯುತ್ತಿವೆ. ಸೂರ್ಯನಿಲ್ಲದೆ ಜೀವನ ಅಸ್ತಿತ್ವ ಇರಲು ಸಾಧ್ಯವಿಲ್ಲ.
🌞 *ರಥಸಪ್ತಮಿ* ಸೂರ್ಯೋದಯಕ್ಕೆ ಸರಿಯಾಗಿ ನದಿ, ಸಮುದ್ರ, ಸರೋವರ, ಸಂಗಮ ಮುಂತಾದೆಡೆ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯ ನೀಡಿದರೆ ಪೂರ್ವ ಜನ್ಮದ ಪಾಪಗಳು ಹಾಗೂ ಈ ಜನ್ಮದ ಸಕಲ ದುಃಖಗಳು ಪರಿಹಾರವಾಗುತ್ತವೆ. ಸೂರ್ಯೋದಯಕ್ಕೆ ಮಾಡುವ *ಮಾಘಸ್ನಾನ* ತುಂಬಾ ಪುಣ್ಯಪ್ರದವಾದುದು. ಆಯುಷ್ಯ, ಆರೋಗ್ಯಸಂಪತ್ತು ಲಭಿಸುವುದಲ್ಲದೇ, ಸೂರ್ಯನ ಅನುಗ್ರಹ ಪ್ರಾಪ್ತಿಯಾಗುತ್ತದೆಂದು ಪುರಾಣದಲ್ಲಿದೆ.
🌞 ಸೂರ್ಯನ ಆರಾಧನೆ ಋಗ್ವೇದದ ಕಾಲದಿಂದಲೂ ಪ್ರಚಲಿತದಲ್ಲಿದೆ. ಪ್ರಾಚೀನ ವೈದಿಕ ಧರ್ಮದಲ್ಲಿ ಸೂರ್ಯನಿಗೆ ಅತ್ಯಂತ ಪ್ರಾಮುಖ್ಯತೆ ಇತ್ತು. ಆತನ ಆರಾಧನೆಯಿಂದಲೇ ಸೌರ ಪಂಥ ಹುಟ್ಟಿದ್ದು. ಕಾಲ ಗಣನೆಯಲ್ಲಿ ಸೌರಮಾನ ಎಣಿಕೆ ಇಂದಿಗೂ ಇದೆ. ಗಾಯತ್ರಿ ಮಂತ್ರದಲ್ಲಿನ ಪ್ರತಿಶಬ್ದವು ಸೂರ್ಯನ ಸಾಮರ್ಥ್ಯಗಳನ್ನು ಕೊಂಡಾಡುವ ಉದ್ದೇಶದಿಂದಲೇ ಬಳಸಲಾಗಿದೆ.
🌞 ದ್ವಾಪರಯುಗದಲ್ಲಿ ಶ್ರೀ ಕೃಷ್ಣನು ಧರ್ಮರಾಜನಿಗೆ ರಥಸಪ್ತಮಿ ಬಗ್ಗೆ ಹೇಳಿದ ಕಥೆಯಿದೆ. ಯಶೋವರ್ಮನೆಂಬ ರಾಜನಿಗೆ ಹುಟ್ಟಿದ ಮಗನು ಹುಟ್ಟಿನಿಂದಲೇ ರೋಗಿಷ್ಠನಾಗಿದ್ದ. ಈ ಬಗ್ಗೆ ಜ್ಯೋತಿಷಿಗಳಿಂದ ವಿವರ ಪಡೆದು ಸಂಚಿತ ಕರ್ಮದಿಂದ ಬಂದಿರುವ ಈ ಖಾಯಿಲೆಗೆ ರಥಸಪ್ತಮಿ ವ್ರತ ಆಚರಿಸಲು ಹೇಳಿದ್ದರು. ಅದರಂತೆ ರಥಸಪ್ತಮಿಯ ದಿನ ಸೂರ್ಯಾರಾಧನೆ ಮಾಡಲಾಗಿ ರಾಜಪುತ್ರನು ಆರೋಗ್ಯವಂತನೂ, ಪ್ರಭಾವಶಾಲಿಯು ಆದನು. ಅಲ್ಲದೇ ಪಾಂಡವರು ವನವಾಸದ ಅವಧಿಯಲ್ಲಿ ಕೃಷ್ಣನ ಆದೇಶದಂತೆ *ಸೂರ್ಯಾರಾಧನೆ* ಮಾಡಿ ಸೂರ್ಯನಿಂದ ಅಕ್ಷಯ ಪಾತ್ರೆ ಪಡೆದಿದ್ದರು. ಅಲ್ಲದೆ ರಾವಣನನ್ನು ಗೆಲ್ಲಬೇಕಾದರೆ ಶ್ರೀರಾಮನೂ ಕೂಡ ಅಗಸ್ತ್ಯರ ಉಪದೇಶದಂತೆ *ಆದಿತ್ಯ ಹೃದಯ*ದ ಮೂಲಕ ಸೂರ್ಯನ ಆರಾಧನೆ ಮಾಡಿದನೆಂದು ರಾಮಾಯಣದಲ್ಲಿ ಹೇಳಿದೆ. ಸೂರ್ಯಾರಾಧನೆ ಮಾಡಿ, ಚಿನ್ನ ನೀಡುವ ಶಮಂತಕ ಮಣಿ ಪಡೆದ ಸತ್ರಾಜಿತನ ಕಥೆ ಹರಿವಂಶದಲ್ಲಿ ಬಂದಿದೆ. ಮಯೂರನೆಂಬ ಕವಿ ಶಿಸೂರ್ಯಶತಕಷಿವೆಂಬ ಗ್ರಂಥ ಬರೆದು ಕಳೆದುಕೊಂಡ ಕಣ್ಣನ್ನು ಮತ್ತೆ ಪಡೆದನೆಂದು ಹೇಳುತ್ತಾರೆ. 🌞 ಶ್ರೀರಾಮ ಸೂರ್ಯವಂಶದವನಾದರೆ, ಕರ್ಣ, ಸುಗ್ರೀವ, ನವಗ್ರಹಗಳಲ್ಲಿ ಶನಿ ಹಾಗೂ ಅಷ್ಟದಿಕ್ಪಾಲಕರಲ್ಲಿ ಯಮ ಸೂರ್ಯನ ಪುತ್ರರಾಗಿದ್ದಾರೆ. 🌞 ವ್ಯಕ್ತಿಯ ಜನ್ಮ ಕುಂಡಲಿಯಲ್ಲಿ ಸೂರ್ಯನು ಬಲಹೀನನಾಗಿದ್ದರೆ ಅಥವಾ ಷಡ್ಬಲವಿರದಿದ್ದರೆ ರಥಸಪ್ತಮಿಯಂದು ಸೂರ್ಯಾರಾಧನೆ ಮಾಡಿದರೆ ದೋಷ ಪರಿಹಾರವಾಗುತ್ತದೆ. ಮಾಣಿಕ್ಯದ ಹರಳು ಧರಿಸಲು ಶುಭ ದಿನವಾಗಿದೆ. ಈ ಸೂರ್ಯರಾಧನೆ ಮುಖ್ಯವಾಗಿ ಭಾರತ, ಮಧ್ಯ ಆಫ್ರಿಕಾ, ಈಜಿಪ್ತ್, ಗ್ರೀಸ್ ಹಾಗೂ ಮಧ್ಯ ಏಷ್ಯಾಗಳಲ್ಲಿ ಆಚರಿಸಲಾಗುತ್ತಿದೆ.
🌞 *ರಥ ಸಪ್ತಮಿ*ಯು ಯಾವಾಗಲೂ ಅರುಣುದೋಯ ವ್ಯಾಪಿನಿಯಾಗಿರುವುದರಿಂದ ಸರಿಯಾಗಿ ಸೂರ್ಯೋದಯಕ್ಕೆ ಆಚರಣೆ ಮಾಡಬೇಕು. *ರಥಸಪ್ತಮಿ*ಯಂದು ಸೂರ್ಯೋದಯ ಕಾಲಕ್ಕೆ ಸ್ನಾನ ಮಾಡಬೇಕು. ಏಳು ಎಕ್ಕೆಯ ಎಲೆಯನ್ನು ತಲೆ, ಹೆಗಲು, ಮೊಣಕಾಲು ಮತ್ತು ಪಾದಗಳ ಮೇಲೆ ಇಟ್ಟುಕೊಂಡು ಸ್ನಾನಮಾಡುವುದು ವಿಶೇಷ.
🌞 *ಸ್ನಾನಕಾಲಕ್ಕೆ ಪಠಿಸಬೇಕಾದ ಮಂತ್ರಗಳು* -
ಯದ್ಯಜ್ಜನ್ಮಕೃತಂ ಪಾಪಂ ಮಯಾ ಸಪ್ತಸು ಜನ್ಮಸು |
ತನ್ಮೇ ರೋಗಂ ಚ ಶೋಕಂ ಚ ಮಾಕರೀ ಹಂತು ಸಪ್ತಮೀ || ೧||
ಏತಜ್ಜನ್ಮಕೃತಂ ಪಾಪಂ ಯಚ್ಚ ಜನ್ಮಾಂತರಾರ್ಜಿತಮ್ |
ಮನೋವಾಕ್ಕಾಯಜಂ ಯಚ್ಚ ಜ್ಞಾತಾಜ್ಞಾತೇ ಚ ಯೇ ಪುನಃ||೨| ಇತಿ ಸಪ್ತವಿಧಂ ಪಾಪಂ ಸ್ನಾನಾನ್ಮೇ ಸಪ್ತಸಪ್ತಿಕೇ |
ಸಪ್ತವ್ಯಾಧಿಸಮಾಯುಕ್ತಂ ಹರ ಮಾಕರಿ ಸಪ್ತಮೀ || ೩ ||
ಹೀಗೆ ಯಾರು ಈ ಮೂರು ಮಂತ್ರೋಚ್ಚಾರಣ ಪೂರಕ ಸ್ನಾನ ಮಾಡಿ ಸೂರ್ಯ ಮತ್ತು ಕೇಶವನ ದರ್ಶನವನ್ನು ಮಾಡುತ್ತಾರೋ, ಅವರು ಕ್ಷಣಮಾತ್ರದಲ್ಲಿ ಪಾಪಗಳಿಂದ ಮುಕ್ತರಾಗುವರು. (ನಿರ್ಣಯ ಸಿಂಧು)
🌞 *ಸ್ನಾನಾನಂತರ ಸೂರ್ಯ ಮತ್ತು ಸಪ್ತಮಿ ತಿಥಿಗೆ ಅರ್ಘ್ಯ* -
ಒಂದು ತಾಮ್ರದ ಕಲಶದಲ್ಲಿ (ತಂಬಿಗೆ) ಶುದ್ಧವಾದ ಜಲ, ಅಕ್ಷತೆ, ಚಂದನ, ಬಿಳಿಬಣ್ಣದ ಹೂವುಗಳು, ಗರಿಕೆ, ಎಕ್ಕೆಯ ಎಲೆಗಳನ್ನು ತುಂಬಿಸಿ, ಮುಂದಿನ ಮಂತ್ರಗಳಿಂದ ಸೂರ್ಯ ಮತ್ತು ಸೂರ್ಯ ಜನನೀಯಾದ ಸಪ್ತಮಿ ತಿಥಿಗೂ ಸಹ ಅರ್ಘ್ಯವನ್ನು ಕೊಡಬೇಕು.
🌞 *ಸೂರ್ಯಾರ್ಘ್ಯ ಮಂತ್ರ* -
ಸಪ್ತಸಪ್ತಿವಹ ಪ್ರೀತ ಸಪ್ತಲೋಕಪ್ರದೀಪನ |
ಸಪ್ತಮೀ ಸಹಿತೋ ದೇವ ಗೃಹಾಣಾರ್ಘ್ಯಂ ದಿವಾಕರ ||
ಎಂದು ಸೂರ್ಯನಿಗೆ ಅರ್ಘ್ಯವನ್ನು ಕೊಡಬೇಕು.
🌞 *ಸಪ್ತಮಿ ಅರ್ಘ್ಯಮಂತ್ರ* -
ಜನನೀ ಸರ್ವಲೋಕಾನಾಂ ಸಪ್ತಮೀ ಸಪ್ತಸಪ್ತಿಕೇ |
ಸಪ್ತವ್ಯಾಹೃತಿಕೇ ದೇವಿ ನಮಸ್ತೇ ಸೂರ್ಯಮಂಡಲೇ ||
ಎಂದು ಸಪ್ತಮೀತಿಥಿಯ ಕುರಿತು ಅರ್ಘ್ಯ ಕೊಡಬೇಕು.
🌞 *ರಥಸಪ್ತಮಿ*ಯ ಪರ್ವ ಎಲ್ಲಾ ರಾಶಿಯವರಿಗೂ ವಿಶೇಷ ಫಲಪ್ರದ. ಸೂರ್ಯನು ಯಾವುದೇ ಜಾತಕದಲ್ಲಿ ಆತ್ಮರೂಪಿಯಾಗಿ ಇರುತ್ತಾನೆ, ಆದ್ದರಿಂದ ಅವನ ಪ್ರೀತ್ಯರ್ಥ ಪೂಜಾಕಾರ್ಯ ಆರೋಗ್ಯ, ಸಂಪತ್ತು ಮತ್ತು ಆನಂದಪ್ರದ.
🌞 *ಇದು ರಥಸಪ್ತಮಿ ಮಾತ್ರವಲ್ಲ: ಆರೋಗ್ಯಸಪ್ತಮಿ* 🌞
🌞🌞🚩🌅🙏🏿 🌞🌞
*ಸೂರ್ಯ ನಮಸ್ಕಾರ*
ಸರ್ವಪಾಪ ನಿವಾರಕ ಮತ್ತು
ಸರ್ವವ್ಯಾಧಿ ನಿವಾರಕ... ಕೃಪೆ : ಸನಾತನ ಗ್ರಂಥಗಳು
=========================
🌞ಮಾಘ ಮಾಸ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು *ಸೂರ್ಯನ ಜನ್ಮದಿನ*.
🌞ಅಲ್ಲದೇ ಸಪ್ತಮಿ ತಿಥಿಯ ಅದಿದೇವತೆಯು ಸೂರ್ಯನೇ ಆಗಿರುವುದರಿಂದ,
*ಇದೇ ಫೆಬ್ರವರಿ ೩ ಶುಕ್ರವಾರ ದಂದು ಸೂರ್ಯ ಆರಾಧನೆಯ ರಥಸಪ್ತಮಿ* ದಿನವೆಂದು ಆಚರಿಸಲಾಗುತ್ತದೆ. 🌞ನಿಯಮಬದ್ಧವಾದ ಉದಯ ಹಾಗೂ ಅಸ್ತಗಳ ಮೂಲಕ ನಮಗೆ ಶಿಸ್ತು ಬದ್ಧವಾದ ಕರ್ತವ್ಯ ಪ್ರಜ್ಞೆಯನ್ನು, ಚೈತನ್ಯವನ್ನು ತುಂಬುವ ಸೂರ್ಯನ ಪೂಜೆಯೇ ಈ ದಿವಸದ ಮುಖ್ಯ ಆಚರಣೆಯಾಗಿದೆ. ಈ ದಿನದಲ್ಲಿ ನಡೆಯುವ ಕೆಲಸ ಕಾರ್ಯಗಳು, ಕೋರಿಕೆಗಳು ಫಲಪ್ರದವಾಗಿರುತ್ತವೆ. ಸೂರ್ಯನ ಪ್ರಕಾಶ ಹೆಚ್ಚುತ್ತಿರುವುದರಿಂದ ಚಳಿಗಾಲದ ಚಳಿ ಮುದುಡಿಕೊಂಡು ಮೈಯಲ್ಲಿ ನವಚೇತನ ತುಂಬಿದಂತೆನಿಸುತ್ತದೆ. ಅಂಗಾಂಗಗಳಲ್ಲಿ ಕಾರ್ಯಕ್ಷಮವಾಗುತ್ತಿವೆ. ಈ ಉಪಕಾರಕ್ಕಾಗಿ ಸೂರ್ಯನನ್ನು ಪೂಜಿಸುವುದು ರೂಡಿಯಲ್ಲಿದೆ.
🌞ಆಹಾರಕ್ಕಾಗಿ, ರೋಗ ನಿವಾರಣೆಗಾಗಿ ಸೂರ್ಯೋಪಾಸನೆ ಮಾಡಬೇಕೆಂದು ಸ್ಕಂದ, ವರಾಹ ಪುರಾಣಗಳಲ್ಲಿ ಹೇಳಿದೆ. ವೈವಸ್ವತ ಮನ್ವಂತರದ ಆರಂಭದ ದಿನ. ಸೂರ್ಯನು ಉತ್ತರಾಯಣನಾಗಿ ಸಪ್ತಾಶ್ವಗಳ ರಥವನ್ನೇರಿ, ಉತ್ತರದಿಕ್ಕಿನ ಮಾರ್ಗದಲ್ಲಿ ಹೊರಟ ದಿನ.
🌞 *ರಥಸಪ್ತಮಿ* ದಿವಸ ರೋಗ ನಿವಾರಣೆಯನ್ನು, ದೇಹದಾರ್ಢ್ಯ ಹಾಗೂ ಆರೋಗ್ಯವನ್ನು ಬಯಸುವವರು ಸೂರ್ಯನ ಆರಾಧನೆ ಮಾಡಬೇಕೆಂಬ ನಿಯಮವಿದೆ. ರೋಗಾಣುಗಳನ್ನು ನಾಶ ಪಡಿಸುವ ಶಕ್ತಿ ಸೂರ್ಯನ ಕಿರಣಗಳಲ್ಲಿವೆ. ಬೆಳಗಿನ ಹಾಗೂ ಸಂಜೆಯ ಸೂರ್ಯ ಕಿರಣಗಳಿಂದ ಆರೋಗ್ಯ ವರ್ಧನೆಯಾಗುತ್ತದೆ. ರೋಗದಿಂದ ನರಳುವವರು ಈ ದಿವಸ ಸೂರ್ಯಾರಾಧನೆಯನ್ನು ಮಾಡಿದರೆ ಬೇಗ ಗುಣಹೊಂದುತ್ತಾರೆ.
🌞ಯೋಗಾಸನಗಳಲ್ಲಿ ಮೊದಲ ಪ್ರಾಶಸ್ತ್ಯ *ಸೂರ್ಯ ನಮಸ್ಕಾರ*ಕ್ಕೆ ನೀಡಬಹುದು. ಏಕೆಂದರೆ ಈ ಅಭ್ಯಾಸವು ಮನಸ್ಸು, ದೇಹ ಮತ್ತು ಉಸಿರಾಟ ವ್ಯವಸ್ಥೆಗಳಿಗೆ ವಿಶೇಷವಾಗಿ ಪರಿಣಾಮಕಾರಿಯಾಗಿದೆ. ಭೂಮಿಯಲ್ಲಿನ ಸಕಲ ಜೀವರಾಶಿಗಳ ಚಟುವಟಿಕೆಗಳು ಸೂರ್ಯನಿಂದ ನಡೆಯುತ್ತಿವೆ. ಸೂರ್ಯನಿಲ್ಲದೆ ಜೀವನ ಅಸ್ತಿತ್ವ ಇರಲು ಸಾಧ್ಯವಿಲ್ಲ.
🌞 *ರಥಸಪ್ತಮಿ* ಸೂರ್ಯೋದಯಕ್ಕೆ ಸರಿಯಾಗಿ ನದಿ, ಸಮುದ್ರ, ಸರೋವರ, ಸಂಗಮ ಮುಂತಾದೆಡೆ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯ ನೀಡಿದರೆ ಪೂರ್ವ ಜನ್ಮದ ಪಾಪಗಳು ಹಾಗೂ ಈ ಜನ್ಮದ ಸಕಲ ದುಃಖಗಳು ಪರಿಹಾರವಾಗುತ್ತವೆ. ಸೂರ್ಯೋದಯಕ್ಕೆ ಮಾಡುವ *ಮಾಘಸ್ನಾನ* ತುಂಬಾ ಪುಣ್ಯಪ್ರದವಾದುದು. ಆಯುಷ್ಯ, ಆರೋಗ್ಯಸಂಪತ್ತು ಲಭಿಸುವುದಲ್ಲದೇ, ಸೂರ್ಯನ ಅನುಗ್ರಹ ಪ್ರಾಪ್ತಿಯಾಗುತ್ತದೆಂದು ಪುರಾಣದಲ್ಲಿದೆ.
🌞 ಸೂರ್ಯನ ಆರಾಧನೆ ಋಗ್ವೇದದ ಕಾಲದಿಂದಲೂ ಪ್ರಚಲಿತದಲ್ಲಿದೆ. ಪ್ರಾಚೀನ ವೈದಿಕ ಧರ್ಮದಲ್ಲಿ ಸೂರ್ಯನಿಗೆ ಅತ್ಯಂತ ಪ್ರಾಮುಖ್ಯತೆ ಇತ್ತು. ಆತನ ಆರಾಧನೆಯಿಂದಲೇ ಸೌರ ಪಂಥ ಹುಟ್ಟಿದ್ದು. ಕಾಲ ಗಣನೆಯಲ್ಲಿ ಸೌರಮಾನ ಎಣಿಕೆ ಇಂದಿಗೂ ಇದೆ. ಗಾಯತ್ರಿ ಮಂತ್ರದಲ್ಲಿನ ಪ್ರತಿಶಬ್ದವು ಸೂರ್ಯನ ಸಾಮರ್ಥ್ಯಗಳನ್ನು ಕೊಂಡಾಡುವ ಉದ್ದೇಶದಿಂದಲೇ ಬಳಸಲಾಗಿದೆ.
🌞 ದ್ವಾಪರಯುಗದಲ್ಲಿ ಶ್ರೀ ಕೃಷ್ಣನು ಧರ್ಮರಾಜನಿಗೆ ರಥಸಪ್ತಮಿ ಬಗ್ಗೆ ಹೇಳಿದ ಕಥೆಯಿದೆ. ಯಶೋವರ್ಮನೆಂಬ ರಾಜನಿಗೆ ಹುಟ್ಟಿದ ಮಗನು ಹುಟ್ಟಿನಿಂದಲೇ ರೋಗಿಷ್ಠನಾಗಿದ್ದ. ಈ ಬಗ್ಗೆ ಜ್ಯೋತಿಷಿಗಳಿಂದ ವಿವರ ಪಡೆದು ಸಂಚಿತ ಕರ್ಮದಿಂದ ಬಂದಿರುವ ಈ ಖಾಯಿಲೆಗೆ ರಥಸಪ್ತಮಿ ವ್ರತ ಆಚರಿಸಲು ಹೇಳಿದ್ದರು. ಅದರಂತೆ ರಥಸಪ್ತಮಿಯ ದಿನ ಸೂರ್ಯಾರಾಧನೆ ಮಾಡಲಾಗಿ ರಾಜಪುತ್ರನು ಆರೋಗ್ಯವಂತನೂ, ಪ್ರಭಾವಶಾಲಿಯು ಆದನು. ಅಲ್ಲದೇ ಪಾಂಡವರು ವನವಾಸದ ಅವಧಿಯಲ್ಲಿ ಕೃಷ್ಣನ ಆದೇಶದಂತೆ *ಸೂರ್ಯಾರಾಧನೆ* ಮಾಡಿ ಸೂರ್ಯನಿಂದ ಅಕ್ಷಯ ಪಾತ್ರೆ ಪಡೆದಿದ್ದರು. ಅಲ್ಲದೆ ರಾವಣನನ್ನು ಗೆಲ್ಲಬೇಕಾದರೆ ಶ್ರೀರಾಮನೂ ಕೂಡ ಅಗಸ್ತ್ಯರ ಉಪದೇಶದಂತೆ *ಆದಿತ್ಯ ಹೃದಯ*ದ ಮೂಲಕ ಸೂರ್ಯನ ಆರಾಧನೆ ಮಾಡಿದನೆಂದು ರಾಮಾಯಣದಲ್ಲಿ ಹೇಳಿದೆ. ಸೂರ್ಯಾರಾಧನೆ ಮಾಡಿ, ಚಿನ್ನ ನೀಡುವ ಶಮಂತಕ ಮಣಿ ಪಡೆದ ಸತ್ರಾಜಿತನ ಕಥೆ ಹರಿವಂಶದಲ್ಲಿ ಬಂದಿದೆ. ಮಯೂರನೆಂಬ ಕವಿ ಶಿಸೂರ್ಯಶತಕಷಿವೆಂಬ ಗ್ರಂಥ ಬರೆದು ಕಳೆದುಕೊಂಡ ಕಣ್ಣನ್ನು ಮತ್ತೆ ಪಡೆದನೆಂದು ಹೇಳುತ್ತಾರೆ. 🌞 ಶ್ರೀರಾಮ ಸೂರ್ಯವಂಶದವನಾದರೆ, ಕರ್ಣ, ಸುಗ್ರೀವ, ನವಗ್ರಹಗಳಲ್ಲಿ ಶನಿ ಹಾಗೂ ಅಷ್ಟದಿಕ್ಪಾಲಕರಲ್ಲಿ ಯಮ ಸೂರ್ಯನ ಪುತ್ರರಾಗಿದ್ದಾರೆ. 🌞 ವ್ಯಕ್ತಿಯ ಜನ್ಮ ಕುಂಡಲಿಯಲ್ಲಿ ಸೂರ್ಯನು ಬಲಹೀನನಾಗಿದ್ದರೆ ಅಥವಾ ಷಡ್ಬಲವಿರದಿದ್ದರೆ ರಥಸಪ್ತಮಿಯಂದು ಸೂರ್ಯಾರಾಧನೆ ಮಾಡಿದರೆ ದೋಷ ಪರಿಹಾರವಾಗುತ್ತದೆ. ಮಾಣಿಕ್ಯದ ಹರಳು ಧರಿಸಲು ಶುಭ ದಿನವಾಗಿದೆ. ಈ ಸೂರ್ಯರಾಧನೆ ಮುಖ್ಯವಾಗಿ ಭಾರತ, ಮಧ್ಯ ಆಫ್ರಿಕಾ, ಈಜಿಪ್ತ್, ಗ್ರೀಸ್ ಹಾಗೂ ಮಧ್ಯ ಏಷ್ಯಾಗಳಲ್ಲಿ ಆಚರಿಸಲಾಗುತ್ತಿದೆ.
🌞 *ರಥ ಸಪ್ತಮಿ*ಯು ಯಾವಾಗಲೂ ಅರುಣುದೋಯ ವ್ಯಾಪಿನಿಯಾಗಿರುವುದರಿಂದ ಸರಿಯಾಗಿ ಸೂರ್ಯೋದಯಕ್ಕೆ ಆಚರಣೆ ಮಾಡಬೇಕು. *ರಥಸಪ್ತಮಿ*ಯಂದು ಸೂರ್ಯೋದಯ ಕಾಲಕ್ಕೆ ಸ್ನಾನ ಮಾಡಬೇಕು. ಏಳು ಎಕ್ಕೆಯ ಎಲೆಯನ್ನು ತಲೆ, ಹೆಗಲು, ಮೊಣಕಾಲು ಮತ್ತು ಪಾದಗಳ ಮೇಲೆ ಇಟ್ಟುಕೊಂಡು ಸ್ನಾನಮಾಡುವುದು ವಿಶೇಷ.
🌞 *ಸ್ನಾನಕಾಲಕ್ಕೆ ಪಠಿಸಬೇಕಾದ ಮಂತ್ರಗಳು* -
ಯದ್ಯಜ್ಜನ್ಮಕೃತಂ ಪಾಪಂ ಮಯಾ ಸಪ್ತಸು ಜನ್ಮಸು |
ತನ್ಮೇ ರೋಗಂ ಚ ಶೋಕಂ ಚ ಮಾಕರೀ ಹಂತು ಸಪ್ತಮೀ || ೧||
ಏತಜ್ಜನ್ಮಕೃತಂ ಪಾಪಂ ಯಚ್ಚ ಜನ್ಮಾಂತರಾರ್ಜಿತಮ್ |
ಮನೋವಾಕ್ಕಾಯಜಂ ಯಚ್ಚ ಜ್ಞಾತಾಜ್ಞಾತೇ ಚ ಯೇ ಪುನಃ||೨| ಇತಿ ಸಪ್ತವಿಧಂ ಪಾಪಂ ಸ್ನಾನಾನ್ಮೇ ಸಪ್ತಸಪ್ತಿಕೇ |
ಸಪ್ತವ್ಯಾಧಿಸಮಾಯುಕ್ತಂ ಹರ ಮಾಕರಿ ಸಪ್ತಮೀ || ೩ ||
ಹೀಗೆ ಯಾರು ಈ ಮೂರು ಮಂತ್ರೋಚ್ಚಾರಣ ಪೂರಕ ಸ್ನಾನ ಮಾಡಿ ಸೂರ್ಯ ಮತ್ತು ಕೇಶವನ ದರ್ಶನವನ್ನು ಮಾಡುತ್ತಾರೋ, ಅವರು ಕ್ಷಣಮಾತ್ರದಲ್ಲಿ ಪಾಪಗಳಿಂದ ಮುಕ್ತರಾಗುವರು. (ನಿರ್ಣಯ ಸಿಂಧು)
🌞 *ಸ್ನಾನಾನಂತರ ಸೂರ್ಯ ಮತ್ತು ಸಪ್ತಮಿ ತಿಥಿಗೆ ಅರ್ಘ್ಯ* -
ಒಂದು ತಾಮ್ರದ ಕಲಶದಲ್ಲಿ (ತಂಬಿಗೆ) ಶುದ್ಧವಾದ ಜಲ, ಅಕ್ಷತೆ, ಚಂದನ, ಬಿಳಿಬಣ್ಣದ ಹೂವುಗಳು, ಗರಿಕೆ, ಎಕ್ಕೆಯ ಎಲೆಗಳನ್ನು ತುಂಬಿಸಿ, ಮುಂದಿನ ಮಂತ್ರಗಳಿಂದ ಸೂರ್ಯ ಮತ್ತು ಸೂರ್ಯ ಜನನೀಯಾದ ಸಪ್ತಮಿ ತಿಥಿಗೂ ಸಹ ಅರ್ಘ್ಯವನ್ನು ಕೊಡಬೇಕು.
🌞 *ಸೂರ್ಯಾರ್ಘ್ಯ ಮಂತ್ರ* -
ಸಪ್ತಸಪ್ತಿವಹ ಪ್ರೀತ ಸಪ್ತಲೋಕಪ್ರದೀಪನ |
ಸಪ್ತಮೀ ಸಹಿತೋ ದೇವ ಗೃಹಾಣಾರ್ಘ್ಯಂ ದಿವಾಕರ ||
ಎಂದು ಸೂರ್ಯನಿಗೆ ಅರ್ಘ್ಯವನ್ನು ಕೊಡಬೇಕು.
🌞 *ಸಪ್ತಮಿ ಅರ್ಘ್ಯಮಂತ್ರ* -
ಜನನೀ ಸರ್ವಲೋಕಾನಾಂ ಸಪ್ತಮೀ ಸಪ್ತಸಪ್ತಿಕೇ |
ಸಪ್ತವ್ಯಾಹೃತಿಕೇ ದೇವಿ ನಮಸ್ತೇ ಸೂರ್ಯಮಂಡಲೇ ||
ಎಂದು ಸಪ್ತಮೀತಿಥಿಯ ಕುರಿತು ಅರ್ಘ್ಯ ಕೊಡಬೇಕು.
🌞 *ರಥಸಪ್ತಮಿ*ಯ ಪರ್ವ ಎಲ್ಲಾ ರಾಶಿಯವರಿಗೂ ವಿಶೇಷ ಫಲಪ್ರದ. ಸೂರ್ಯನು ಯಾವುದೇ ಜಾತಕದಲ್ಲಿ ಆತ್ಮರೂಪಿಯಾಗಿ ಇರುತ್ತಾನೆ, ಆದ್ದರಿಂದ ಅವನ ಪ್ರೀತ್ಯರ್ಥ ಪೂಜಾಕಾರ್ಯ ಆರೋಗ್ಯ, ಸಂಪತ್ತು ಮತ್ತು ಆನಂದಪ್ರದ.
🌞 *ಇದು ರಥಸಪ್ತಮಿ ಮಾತ್ರವಲ್ಲ: ಆರೋಗ್ಯಸಪ್ತಮಿ* 🌞
🌞🌞🚩🌅🙏🏿 🌞🌞
*ಸೂರ್ಯ ನಮಸ್ಕಾರ*
ಸರ್ವಪಾಪ ನಿವಾರಕ ಮತ್ತು
ಸರ್ವವ್ಯಾಧಿ ನಿವಾರಕ... ಕೃಪೆ : ಸನಾತನ ಗ್ರಂಥಗಳು
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ