ಭಾನುವಾರ, ಜೂನ್ 25, 2017

ತುಳಸೀ ಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಹಚ್ಚಬೇಕು

ತುಳಸೀ ಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಹಚ್ಚಬೇಕು
ಹಿಂದೂಗಳ ಮನೆಗಳನ್ನು ಹಾಗೂ ಮನಸ್ಸುಗಳನ್ನು ತುಳಸಿ ವೃಕ್ಷವು ಏಕಪ್ರಕಾರವಾಗಿ ಅಲಂಕರಿಸುತ್ತದೆ. ಅಂಗಳದಲ್ಲಿ ತುಳಸಿ ವೃಂದಾವನವಿರುವ ಮನೆಗಳನ್ನು ಆಸ್ತಿಕ ಹಿಂದೂಗಳ ಮನೆಗಳೆಂದು ಸುಲಭವಾಗಿ ಗುರುತಿಸಬಹುದು.
ತುಳಸಿ ಕಾನನಂ ಯತ್ರ ಯತ್ರಪದ್ಮವ ನಾನಿಚ|
ವಸಂತಿ ವೈಷ್ಣವಾಯತ್ರ ತತ್ರ ಸನ್ನಿಹಿತೋ ಹರಿ:||
ಅಂದರೆ ತುಳಸಿವನವು ಹಬ್ಬಿರುವ ಜಾಗದಲ್ಲಿ ಶ್ರೀ ಹರಿಯು ಸದಾ ವಾಸಮಾಡುತ್ತಾನೆ. ಶೈವರು, ವೈಷ್ಣವರು, ಗಾಣಸತ್ಯರು, ದೇವೀ ಉಪಾಸಕರು ಮೊದಲಾದ ಎಲ್ಲಾ ಪಂಥಗಳ ಆಸ್ತಿಕ ಹಿಂದೂಗಳೂ ತಮ್ಮ ಮನೆಯಂಗಳಗಳಲ್ಲಿ ತುಳಸಿ ವೃಂದಾವನ ನಿರ್ಮಿಸಿ ತುಳಸಿಯನ್ನು ನೆಟ್ಟು ಪೂಜಿಸುತ್ತಾರೆ.
ತುಳಸೀ ಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಹಚ್ಚಬೇಕು
ಹಗಲು ಹೊತ್ತಿನಲ್ಲಿ ವಾತಾವರಣದಲ್ಲಿನ ಅನಿಷ್ಟ ಶಕ್ತಿಗಳು ಸುಪ್ತವಾಗಿದ್ದು ಸೂರ್ಯಾಸ್ತದ ಬಳಿಕ ಅವುಗಳ ಪ್ರಕಟೀಕರಣದಿಂದ ಜೀವಗಳಿಗೆ ಅಪಾರ ತೊಂದರೆಯಾಗತೊಡಗುತ್ತದೆ. ಇದರಿಂದಾಗಿಯೇ ಸಂಧ್ಯಾಕಾಲದಲ್ಲಿ ದೃಷ್ಟಿ ತಗಲುವುದು, ರಾತ್ರಿ ಕಾಲದಲ್ಲಿ ದುಷ್ಕೃತ್ಯಗಳು ನಡೆಯುವುದು ಸಾಮಾನ್ಯವಾಗಿದೆ. ಇಂತಹ ತೊಂದರೆಗಳಿಂದ ಪಾರಾಗಲು ಸಂಧ್ಯಾಕಾಲದಲ್ಲಿ ದೇವರಿಗೆ ದೀಪ ಹಚ್ಚುವುದು, ಊದುಬತ್ತಿ ಉರಿಸುವುದು, ಶಂಖಧ್ವನಿ ಮಾಡುವುದು, ಜಾಗಟೆ, ತಾಳ ಬಾರಿಸುವುದು, ಭಜನೆ ಮಾಡುವುದು, ಉಪನಯನವಾದವರು ಸಂಧ್ಯಾವಂದನೆ ಮಾಡುವುದು, ಭಸ್ಮಧಾರಣೆ ಇತ್ಯಾದಿಗಳನ್ನೂ ಮಾಡುವುದು ಅಗತ್ಯವಾಗಿದೆ. ಗೃಹಿಣಿಯರು ಸಂಜೆಯ ಹೊತ್ತು ಶುಚಿರ್ಭೂತರಾಗಿ ಸೂರ್ಯಾಸ್ತದ ಸಮಯಕ್ಕೆ ಸರಿಯಾಗಿ ತುಳಸಿಕಟ್ಟೆಯಲ್ಲಿ ತುಳಸಿಯ ಕಡೆಗೆ ದೀಪ ಜ್ವಾಲೆಯು ಮುಖಮಾಡಿರುವಂತೆ ತುಪ್ಪದ ಯಾ ಎಳ್ಳೆಣ್ಣೆಯ ದೀಪವನ್ನು ಸಾತ್ವಿಕ ಊದುಬತ್ತಿಯನ್ನು ಉರಿಸಿಟ್ಟು ತುಳಸಿಗೆ ಪ್ರದಕ್ಷಿಣೆ ಗೈದು ನಮಸ್ಕರಿಸಬೇಕು. ತುಳಸಿಯ ಸ್ತೋತ್ರವನ್ನೂ ಹೇಳಬಹುದು. ಹೀಗೆ ಮಾಡುವುದರಿಂದ ಆ ದೀಪದ ಬೆಳಕಿನಲ್ಲಿ ತುಳಸಿಯು ಬ್ರಹ್ಮಾಂಡದಿಂದ ಶ್ರೀಕೃಷ್ಣನ ಮಾರಕ ತತ್ತ್ವವನ್ನು ಆಕರ್ಷಿಸಿ ತುಳಸಿಕಟ್ಟೆಯ ಹಾಗೂ ಮನೆಯ ಸುತ್ತಲೂ ಅದನ್ನು ಪ್ರಕ್ಷೇಪಿಸಿ ಕಣ್ಣಿಗೆ ಗೋಚರವಾಗದ ಸೂಕ್ಷ್ಮರೂಪದ ಸಂರಕ್ಷಣಾ ಕವಚವನ್ನು ನಿರ್ಮಿಸಿ ಅನಿಷ್ಟ ಶಕ್ತಿಗಳಿಂದ ಜೀವಗಳಿಗೆ ತೊಂದರೆಯಾಗದಂತೆ ರಕ್ಷಣೆ ನೀಡುವುದು ದೀಪ ಜ್ಯೋತಿಯ ಸ್ತೋತ್ರವು ಈ ಕೆಳಗೆ ಕಂಡಂತಿರುವುದು
ಶುಭಂ ಕರೋತಿ ಕಲ್ಯಾಣಂ
ಆರೋಗ್ಯಂ ಧನಸಂಪನದಃ
ಶತ್ರುಬುದ್ಧಿ ವಿನಾಶಾಯ
ದೀಪಜ್ಯೋತಿರ್ನಮೋಸ್ತುತೆ|
ದೀಪಜ್ಯೋತಿಃ ಪರಬ್ರಹ್ಮಾ
ದೀಪಜ್ಯೋತಿರ್ಜನಾರ್ದನಃ
ದೀಪೋ ಹರತಿ ಪಾಪಾನಿ
ಸಂಧ್ಯಾದೀಪ ನಮೋಸ್ತುತೇ||

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ