ಬುಧವಾರ, ಆಗಸ್ಟ್ 2, 2017

ಶಿಶುಜನನವಾದಾಗ ಹುಟ್ಟಿದ ನಕ್ಷತ್ರಗಳು

ಶಿಶುಜನನವಾದಾಗ ಹುಟ್ಟಿದ ನಕ್ಷತ್ರಗಳು , ಗ್ರಹಣ ದೋಷಗಳು ಮತ್ತು  ಶಾಂತಿಗಳು
ಪ್ರತ್ಯೇಕ ವ್ಯಕ್ತಿಗಾಗಿ ಮಾಡುವ ವೈದಿಕ ಪೂಜಾ ವಿಧಾನಕ್ಕೆ ಶಾಂತಿ ಎನ್ನುತ್ತಾರೆ.ಯಾವ ಕಾರಣಕ್ಕಾಗಿ ಯಾವ ಶಾಂತಿಯನ್ನು ಮಾಡಬೇಕು?
ಮಗುವಿನ ಜನನ ಕಾಲದಲ್ಲಿ ನಾನಾವಿಧ ದೋಷಾದಿಗಳು ಬರುತ್ತವೆ. ಇದನ್ನು ಗುರುಗಳ ಮುಖೇನ ತಿಳಿದು ಬಂದಿರುವ ದೋಷ ನಿವಾರಣೆಗೆ ಶಾಂತ್ಯಾದಿಗಳನ್ನು ಮಾಡಿಕೊಳ್ಳಬೇಕು.
೧. ಕೃಷ್ಣಚತುರ್ದಶಿ ಜನನ ಶಾಂತಿ
ಮಗು ಕೃಷ್ಣ ಪಕ್ಷದ ಚತುರ್ದಶಿಯ ದಿನ ಜನನವಾದಲ್ಲಿ ಅನೇಕವಾದ ಅನಿಷ್ಠ ಫಲಗಳು ಬರುತ್ತದೆ.ಚತುರ್ದಶಿ ತಿಥಿಯ ಕಾಲವನ್ನು ಆರು ಭಾಗ ಮಾಡಿ ಒಂದನೇಯ ಭಾಗವನ್ನು ಶುಭ ಎಂತಲೂ,ಏ ಎರಡನೇಯ ಭಾಗವನ್ನು ತಂದೆಗೆ ಅನಿಷ್ಠ ಎಂತಲೂ,ಮೂರನೇಯ ಭಾಗವನ್ನು ತಾಯಿಗೆ ಅನಿಷ್ಠ ಎಂತಲೂ, ನಾಲ್ಕನೇಯ ಭಾಗವನ್ನು ಮಾವನಿಗೆ ಅನಿಷ್ಠ ಶಎಂದೂ,ಐದನೇಯ ಭಾಗವನ್ನು ವಂಶನಾಶ ಎಂತಲೂ,ಆರನೇಯ ಭಾಗವನ್ನು ಧನಹಾನಿ ಎಂದೂ ಶಾಸ್ತ್ರದಲ್ಲಿ ಹೇಳಿದೆ.
೨. ಸಿನೀವಾಲೀ-ಕುಹೂ ಜನನ ಶಾಂತಿ
ಮಗುವು ಅಮವಾಸ್ಯೆಯ ದಿನದಂದು ಜನಿಸಿದಲ್ಲಿ, ಅಮವಾಸ್ಯೆಯ ಪರಮಘಟಿಯನ್ನು ೮ ಭಾಗವನ್ನು ಮಾಡಿ ಪ್ರಥಮ ಭಾಗ ಜನನಕ್ಕೆ ಸಿನೀವಾಲೀ, ಅಷ್ಟಮ ಭಾಗಕ್ಕೆ ಕುಹೂ ಜನನ ಎಂದೂ ಕರೆಯುತ್ತಾರೆ. ಈ ಜನನದಲ್ಲಿ ಬರುವ ದೋಷ ನಿವಾರಣೆಗೆ ಶಾಂತ್ಯಾದಿಗಳನ್ನು ಮಾಡಿಸಿಕೊಳ್ಳಬೇಕು.
೩. ದರ್ಶ ಜನನ ಶಾಂತಿ:
ಅಮವಾಸ್ಯೆ ತಿಥಿಯ ಪರಮಘಟಿಯನ್ನು ಭಾಗವನ್ನಾಗಿ ಮಾಡಿದಾಗ ೨ನೇಯ ಭಾಗದಿಂದ ೬ನೇ ಭಾಗದವರೆಗೆ ಹುಟ್ಟಿದ ಮಗುವಿಗೆ ಬರುವ ದೋಷ ನಿವಾರಣೆಗೆ ದರ್ಶ ಜನನ ಶಾಂತಿ ಅಥವಾ ಅಮವಾಸ್ಯೆ ಜನನ ಶಾಂತಿ ಮಾಡಿಸಿಕೊಳ್ಳಬೇಕು.
೪. ಸೂರ್ಯ ಸಂಕ್ರಾಂತಿ ಜನನ ಶಾಂತಿ ಮತ್ತು ವ್ಯತಿಪಾತ, ವೈದ್ರತಿ, ಅತೀಗಂಡ, ಗಂಡಯೋಗ ಜನನ ಶಾಂತಿ
ಮಗುವು ಮೇಲೆ ಕಾಣಿಸಿದ ಕಾಲದಲ್ಲಿ ಜನಿಸಿದರೆ ಅದರ ದೋಷ ನಿವಾರಣೆಗೆ ಶಾಂತ್ಯಾದಿಗಳನ್ನು ಮಾಡಿಸಿಕೊಳ್ಳಬೇಕು.
೫. ಆಶ್ಲೇಷಾ ಜನನ ಶಾಂತಿ
ಮಗುವು ಆಶ್ಲೇಷಾ ನಕ್ಷತ್ರ ಇರುವ ಸಮಯದಲ್ಲಿ ಜನಿಸಿದರೆ ದೋಷಾದಿಗಳ ನಿವಾರಣೆಗೆ ಶಾಂತಿಗಳನ್ನು ಮಾಡಿಸಿಕೊಳ್ಳಬೇಕು. ಮೊದಲನೇ ಪಾದ ಜನನಕ್ಕೆ ಶುಭ ಫಲ, ದ್ವಿತೀಯ ಪಾದ ಜನನಕ್ಕೆ ಧನನಾಶ, ತೃತೀಯ ಪಾದ ಜನನಕ್ಕೆ ತಾಯಿಗೆ ಅನಿಷ್ಠ.
೬. ಜ್ಯೇಷ್ಠ ನಕ್ಷತ್ರ ಜನನ ಶಾಂತಿ
ಮಗುವು ಜ್ಯೇಷ್ಠ ನಕ್ಷತ್ರ ಇರುವ ಸಮಯದಲ್ಲಿ ಜನಿಸಿದರೆ ದೋಷಾದಿಗಳ ನಿವಾರಣೆಗೆ ಶಾಂತಿಗಳನ್ನು ಮಾಡಿಸಿಕೊಳ್ಳಬೇಕು. ವಿಶೇಷತಃ ೪ನೇ ಪಾದದಲ್ಲಿ ಜನಿಸಿದರೆ ತಂದೆ-ತಾಯಿಗೆ ಅನಿಷ್ಠ.
೭. ಮೂಲಾ ನಕ್ಷತ್ರ ಜನನ ಶಾಂತಿ
ಮಗುವು ಮೂಲಾ ನಕ್ಷತ್ರ ಇರುವ ಸಮಯದಲ್ಲಿ ಜನಿಸಿದರೆ ೧ನೇ ಪಾದಕ್ಕೆ ಅತೀ ಅನಿಷ್ಠ. ೨ನೇ ಪಾದಕ್ಕೆ ತಾಯಿಗೆ ಅನಿಷ್ಠ. ೩ನೇ ಪಾದಕ್ಕೆ ಧನನಾಶ. ೪ನೇ ಪಾದಕ್ಕೆ ಕುಲನಾಶ. ಹೆಣ್ಣು ಮಗು ಈ ನಕ್ಷತ್ರದಲ್ಲಿ ಜನಿಸಿದರೆ ಗಂಡನ ತಂದೆಗೆ ಅತೀ ಅನಿಷ್ಠ.
೮. ಗ್ರಹಣ ಜನನ ಶಾಂತಿ
ಮಗುವು ಸೂರ್ಯ ಅಥವಾ ಚದ್ರ ಗ್ರಹಣ ಕಾಲದಲ್ಲಿ ಜನಿಸಿದರೆ ದೋಷ ನಿವಾರಣೆಗೆ ಶಾಂತ್ಯಾದಿಗಳನ್ನು ಮಾಡಿಸಿಕೊಳ್ಳಬೇಕು.
೯. ಏಕ ನಕ್ಷತ್ರ ಜನನ ಶಾಂತಿ
ತಾಯಿ, ತಂದೆ, ಅಣ್ಣ-ತಮ್ಮ ಎಲ್ಲರ ನಕ್ಷತ್ರ ಒಂದೇ ಆದಲ್ಲಿ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು.
೧೦. ವಿಷ ಘಟಿ ಜನನ ಶಾಂತಿ
ಮಗುವು ವಿಷ ನಾಡಿಯಲ್ಲಿ ಜನಿಸಿದರೆ ಸರ್ವರಿಷ್ಠ. ಆದ್ದರಿಂದ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು.
೧೧. ತ್ರಿಕ ಪ್ರಸವ ಶಾಂತಿ
ತಾಯಿಗೆ ಏಕ ಕಾಲದಲ್ಲಿ ಮೂರು ಮಗುವಿನ ಜನನವಾದರೆ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು.
೧೨. ಭದ್ರಾ ಜನನ ಶಾಂತಿ:
ಭದ್ರ ಯೋಗದಲ್ಲಿ ಜನಿಸಿದ ಮಗುವಿಗೆ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು.
೧೩. ಅಧೋಮುಖ ಜನನ ಶಾಂತಿ
ಮಗು ಜನಿಸಿವಾಗ ಕೆಳಮುಖವಾಗಿ ಜನಿಸಿದರೆ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು.
೧೪. ಸದಂತ ಜನನ ಶಾಂತಿ
ಮಗು ಹುಟ್ಟಿದಾಗಲೇ ಹಲ್ಲು ಇದ್ದರೆ ಬರುವ ದೋಷ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು.
೧೫. ಯಮಳ ಜನನ ಶಾಂತಿ
ಏಕ ಕಾಲದಲ್ಲಿ ಎರಡು ಮಗುವಿನ ಜನನವಾದಲ್ಲಿ ದೋಷ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು..
೧೬. ಪ್ರಸವ ವೈಕ್ರತಿ ಜನನ ಶಾಂತಿ
ಮಗು ಜನಿಸುವಾಗ ಅಂಗ ವಿಕಲವಿದ್ದಲ್ಲಿ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು.
೧೭. ದಿನ ಕ್ಷಯ, ವ್ಯತಿಪಾತ ಯೋಗಾದಿ ಜನನ ಶಾಂತಿ
೧೮. ಬಾಲಾರಿಷ್ಠ ಜನನ ಶಾಂತಿ
ಮಗು ಜನಿಸಿದಾಗ ಜನ್ಮದಲ್ಲಿ ರವಿ, ಕುಜ,ಶನಿ,ರಾಹು,ಕೇತುಗಳು ವಿಷಮ ಸ್ಥಿತವಾದಲ್ಲಿ ವಿಪರೀತ ಕಷ್ಟಗಳನ್ನು ಕೊಡುತ್ತದೆ. ಈ ಕಷ್ಟಗಳ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಿಕೊಳ್ಳಬೇಕು. ಈ ಶಾಂತಿಯನ್ನು ಮಗುವಿನ ಜನ್ಮದ ನಂತರದ ೧೨ನೆ ದಿನದ ಮೇಲೆ ಮಗು ಚಿಕ್ಕದಿದ್ದಾಗಲೆ ಮಾಡಿಕೊಳ್ಳುವುದು ಒಳ್ಳೆಯದು.
೧೯. ಅರಿಷ್ಟತ್ರಯ ಶಾಂತಿ
ಮಗು ಜನಿಸಿದಾಗ ವಿಷಮ ಸ್ಥಾನ ಸ್ಥಿತರಾದ ಗ್ರಹದಿಂದ ಬರುವ ದೋಷ ನಿವಾರಣೆಗಾಗಿ ಈ ಶಾಂತಿ ಅಗತ್ಯ.
೨೦. ಪಂಚಮಾರಿಷ್ಟ ಶಾಂತಿ
ಮಗು ಜನಿಸಿದಾಗ ಜನ್ಮ ಲಗ್ನ-ರಾಶಿಯಿಂದ ಪಂಚಮದಲ್ಲಿ ರವಿ ಇದ್ದರೆ ತಂದೆಗೆ ಅನಿಷ್ಠ, ಶನಿ ಇದ್ದರೆ ತಾಯಿಗೆ ಅನಿಷ್ಠ, ಕುಜ ಇದ್ದರೆ ಸಹೋದರೆನಿಗೆ, ಚಂದ್ರ ಇದ್ದರೆ ಮಾವನಿಗೆ, ಗುರುವಿದ್ದರೆ ತಾಯಿಯ ತಂದೆಗೆ, ಶುಕ್ರನಿದ್ದರೆ ಅಜ್ಜನಿಗೆ, ಶನಿ-ರಾಹುಗಳಿದ್ದರೆ ಮಗುವಿಗೆ ಹಾಗೂ ಕೇತುವಿದ್ದಲ್ಲಿ ಸಹೋದರನಿಗೆ ಅನಿಷ್ಠವಾದುದರಿಂದ ಈ ಶಾಂತಿಯ ಅವಶ್ಯಕತೆ ಇರುತ್ತದೆ.
೨೧. ಗೋಮುಖ ಪ್ರಸವ ಶಾಂತಿ
ಮಗು ಜನಿಸಿದಾಗ ಬಂದಿರುವ ದಿನಕ್ಷಯ, ವ್ಯತೀಪಾತ-ವಾಘಾತ, ವಿಷ್ಠಿ-ಶೂಲ, ಗಂಡ-ಮೃತ್ಯು ಯೋಗ, ದಗ್ದಯೋಹ, ಆಶ್ಲೇಷ, ಜ್ಯೇಷ್ಠ, ಮೂಲಾ ನಕ್ಷತ್ರದಲ್ಲಿ ಜನಿಸಿದಾಗ ಎಲ್ಲಾ ದೋಷ ನಿವಾರಣೆಗೆ ಈ ಶಾಂತಿಯನ್ನು ಮತ್ತು ಗೋ ಗರ್ಭ ಜನನವನ್ನು ಮಾಡಿ ಆಮೇಲೆ ಉಕ್ತವಾದ ಶಾಂತಿಯನ್ನು ಮಾಡಬೇಕು...

Collected by Whatsapp.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ