ಖಂಡಗ್ರಾಸ ಚಂದ್ರಗ್ರಹಣ ( ಸೋಮವಾರ ಚಂದ್ರಗ್ರಹಣವಾಗುವುದರಿಂದ ಚೂಡಾಮಣಿ ಯೋಗವಿರುತ್ತದೆ.)
ಹೇಮಲಂಬಿ ನಾಮ ಸಂವತ್ಸರದ ಶ್ರಾವಣ ಶುಕ್ಲ ಹುಣ್ಣಿಮೆ 7-08-2017 ನೇ ಸೋಮವಾರ ಶ್ರವಣಾ ನಕ್ಷತ್ರ ಮಕರ ರಾಶಿಯಲ್ಲಿ ಚಂದ್ರನಿಗೆ ಕೇತು ಗ್ರಹಣ.
ಮಾಂದ್ಯಾರಂಭ. 9.18pm
ಗ್ರಹಣ ಸ್ಪರ್ಶ 10.53pm
ಗ್ರಹಣ ಮಧ್ಯ 11.50pm
ಗ್ರಹಣ ಮೋಕ್ಷ 12.48am(8-8-2017)
ಮಾಂದ್ಯಾವಸಾನ 2.23am
ಗ್ರಹಣ ಸ್ಪರ್ಶ 10.53pm
ಗ್ರಹಣ ಮಧ್ಯ 11.50pm
ಗ್ರಹಣ ಮೋಕ್ಷ 12.48am(8-8-2017)
ಮಾಂದ್ಯಾವಸಾನ 2.23am
ಸಂಜೆ ಸಂಧ್ಯಾಕಾಲದ ನಂತರ ಆಹಾರವನ್ನೂ ಸ್ವೀಕರಿಸಬಾರದು. ರಾತ್ರಿ ಭೋಜನ ನಿಷಿಧ್ದ. ಅಶಕ್ತರು ರಾತ್ರಿ ಏಳು ಗಂಟೆಯ ವರೆಗೆ ಲಘು ಆಹಾರವನ್ನು ಸ್ವೀಕರಿಸಬಹುದು. ಆ ನಂತರ ಅವರೂ ಸಹ ಸ್ವೀಕರಿಸಬಾರದು.
(ಗ್ರಹಣಕಾಲದಲ್ಲಿ ಮಾಡಲೇಬೇಕಾದ್ದು)
ಗ್ರಹಣದ ಆಚರಣೆ ಶಾಸ್ತ್ರದ ವಚನ ;ಎಂದರೆ ಭಗವಂತನ ಆದೇಶ. ಪರಮಾತ್ಮ ನಮ್ಮ ಬದುಕಿಗೆ ಹಾಕಿದ ಸಂವಿಧಾನ ಅದು. ಅವಶ್ಯವಾಗಿ ಆಚರಣೆ ಮಾಡಲೇಬೇಕು.
ಗ್ರಹಣದ ಆಚರಣೆ ಶಾಸ್ತ್ರದ ವಚನ ;ಎಂದರೆ ಭಗವಂತನ ಆದೇಶ. ಪರಮಾತ್ಮ ನಮ್ಮ ಬದುಕಿಗೆ ಹಾಕಿದ ಸಂವಿಧಾನ ಅದು. ಅವಶ್ಯವಾಗಿ ಆಚರಣೆ ಮಾಡಲೇಬೇಕು.
೧ ಗ್ರಹಣದ ಆರಂಭ ಅಂತ್ಯಗಳಲ್ಲಿ ಸ್ನಾನವನ್ನು ಮಾಡಬೇಕು.
೨ ಗ್ರಹಣದ ಆರಂಭದಲ್ಲಿ ಮಾಡುವ ಸ್ನಾನದಿಂದ ಜಪ-ಪಾರಾಯಣ-ದಾನಾದಿಗಳಿಗೆ ಮಾತ್ರ ಅಧಿಕಾರ. ಊಟ, ಉಪಾಹಾರಗಳಿಗಿಲ್ಲ.
೩ಗ್ರಹಣ ಬಿಟ್ಟ ನಂತರವೇ ಅಡಿಗೆ ಮಾಡಿ, ಊಟ ಮಾಡಬೇಕು. ಗ್ರಹಣಕ್ಕಿಂತ ಮುಂಚೆ ಮಾಡಿಟ್ಟು, ಅಥವಾ ಗ್ರಹಣಕಾಲದಲ್ಲಿ ಮಾಡಿಟ್ಟು ತಿನ್ನಬಾರದು.
೪ "ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುಸೂತಕೇ"
ಎಲ್ಲ ವರ್ಣದವರೂ ಗ್ರಹಣಕಾದಲ್ಲಿ ಮೈಲಿಗೆಯನ್ನು ಆಚರಿಸಬೇಕು.
೫ ಜನನಶೌಚವಿರುವವರು, ಮೃತಾಶೌಚವಿರುವವರು ಮತ್ತು ರಜಸ್ವಲೆಯಾದವರೂ ಸಹ ಗ್ರಹಣದ ಸ್ಪರ್ಶಸ್ನಾನ, ಮುಕ್ತಿಸ್ನಾನಗಳನ್ನು ಮಾಡಲೇಬೇಕು. ಅವರು ಜಪ ಪಾರಾಯಣಗಳನ್ನು ಮಾಡಬಾರದು.
ಎಲ್ಲ ವರ್ಣದವರೂ ಗ್ರಹಣಕಾದಲ್ಲಿ ಮೈಲಿಗೆಯನ್ನು ಆಚರಿಸಬೇಕು.
೫ ಜನನಶೌಚವಿರುವವರು, ಮೃತಾಶೌಚವಿರುವವರು ಮತ್ತು ರಜಸ್ವಲೆಯಾದವರೂ ಸಹ ಗ್ರಹಣದ ಸ್ಪರ್ಶಸ್ನಾನ, ಮುಕ್ತಿಸ್ನಾನಗಳನ್ನು ಮಾಡಲೇಬೇಕು. ಅವರು ಜಪ ಪಾರಾಯಣಗಳನ್ನು ಮಾಡಬಾರದು.
೬ ಗ್ರಹಣದ ಎರಡೂ ಸ್ನಾನಗಳಲ್ಲಿ ಉಟ್ಟ ಬಟ್ಟೆಯಲ್ಲಿಯೇ ಸ್ನಾನ ಮಾಡಬೇಕು.
೭ ಗ್ರಹಣಕಾಲದಲ್ಲಿ ನದಿಗಳಲ್ಲಿ, ಮಹಾನದಿಗಳಲ್ಲಿ ಮಾಡುವ ಸ್ನಾನ ಅತೀ ಶ್ರೇಷ್ಠ. ಸಮುದ್ರಸ್ನಾನ ಸರ್ವೋತ್ತಮ
೮ ಗ್ರಹಣಕಾಲದಲ್ಲಿ ಬಿಸಿನೀರಿನ ಸ್ನಾನ ಮಾಡಬಾರದು ಎಂದು ಯಮನ ಆದೇಶವಿದೆ. ತೀರ ಅಶಕ್ತರಾದವರು ಮಾತ್ರ ಬಿಸಿನೀರಿನಿಂದ ಸ್ನಾನವನ್ನು ಮಾಡಬೇಕು
೯ ಯಾರ ಮನೆಯಲ್ಲಿ ಭಾವಿ ಮುಂತಾದವುಗಳಿಂದ ಗ್ರಹಣದ ನಂತರ ಶುದ್ಧ ನೀರನ್ನು ತೆಗೆದುಕೊಳ್ಳಲು ಸಾಧ್ಯವಿದೆಯೋ ಅಂತಹವರು ಹಾಗೆಯೇ ಮಾಡಬೇಕು. ಯಾರ ಮನೆಯಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳುವ ಅನಿವಾರ್ಯತೆ ಇದೆ ಅಂತಹವರು ನೀರಿನ ಪಾತ್ರೆಗಳ (ಹಾಲು, ಮೊಸರು, ತುಪ್ಪ ಮತ್ತು ಎಣ್ಣೆಯಲ್ಲಿ ಕರಿದ ಪದಾರ್ಥಗಳು ಇತರೆ) ಮೇಲೆ ದರ್ಭೆಯನ್ನು ಹಾಕಿರಬೇಕು.
೧೦ ಇಡಿಯ ಗ್ರಹಣ ಕಾಲದಲ್ಲಿ ದೇವರಸ್ಮರಣೆ, ನಮಸ್ಕಾರ, ಜಪ, ಪಾರಾಯಣಗಳನ್ನು ಮಾಡಬೇಕು. ಗ ಹೋಮ, ಶ್ರಾದ್ಧ, ಪಾರಾಯಣ, ದಾನಗಳನ್ನು ಮಾಡಬೇಕು.( ಇನ್ನೇನು ಗ್ರಹಣ ಬಿಡುತ್ತದೆ ಎನ್ನುವಾಗ ಮಾಡುವ ದಾನ ಅತೀಶ್ರೇಷ್ಠ)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ