ನಿದ್ದೆ ಎಂದ ಕೂಡಲೆ ನೆನಪಾಗುವ ಮೊದಲ ಶಬ್ದ ಕನಸು. ಆದರೆ ಇದಾದ ನಂತರ ಯಾವ ಶಬ್ದ ನೆನಪಾಗುತ್ತದೆ ಎಂದರೆ ಬಹುಶಃ ಅದು ಗೊರಕೆ. ಜಗತ್ತಿನ ಅದೆಷ್ಟೊ ಮಂದಿಗೆ ಗೊರಕೆ ಒಂದು ತಮಾಷೆಯ ಅಥವಾ ನಗುವಿನ ವಿಷಯವಲ್ಲ. ಗೊರಕೆ ಹೊಡೆಯುವ ಜನರನ್ನು ಪ್ರೀತಿಸುವವರ ಪಾಲಿಗೂ ಇದು ನಿರ್ಲಕ್ಸ್ಯ ಮಾಡುವ ವಿಷಯವಲ್ಲ. ಇದು ಬಹಳ ಕಡೆ ನಿಮ್ಮನು ಮುಜುಗರಕ್ಕೆ ತರುವುದೇ ಇದಕ್ಕೆ ಕಾರಣ. ವಯಸ್ಸಿನೊಂದಿಗೆ ಗೊರಕೆಯ ಪ್ರಮಾಣವೂ ಹೆಚ್ಚಾಗುತ್ತದೆ.
ಹಾಗಾದರೆ ಗೊರಕೆಗೆ ಕಾರಣಗಳೇನು? ಇದಕ್ಕೆ ದೈಹಿಕ ಕಾರಣಗಳಿರಬಹುದು. ಮೂಗು, ಗಂಟಲಿನಲ್ಲಿರುವ ತಡೆಗಳು, ಗಂಟಲು ನೋವು, ದೇಹದಲ್ಲಿ ಹೆಚ್ಚಾಗಿರುವ ಕೊಬ್ಬು, ಸರಿಯಾಗಿರದ ಮಲಗುವ ಭಂಗಿಗಳು ಕಾರಣವಾಗಿರಬಹುದು. ವೈಜ್ಞಾನಿಕವಾಗಿ ಹೇಳುವುದಾದರೆ ಮೃದು ಅಂಗುಳವು ಗಾಳಿಯಲ್ಲಿ ಬೀಸಲು ಆರಂಭವಾದಾಗ ಗೊರಕೆ ಆರಂಭವಾಗುತ್ತದೆ.
ನೀವು ಗೊರಕೆ ಹೊಡೆಯಲು ಕಾರಣ ಏನಿರಬಹುದು?
ಗೊರಕೆಯಿಂದಾಗಿ ಕೆಲವೊಮ್ಮೆ ನಿಮಗೆ ಬಹಳವೇ ಬೇಸರ ಬರಬಹುದು. ಗೊರಕೆಯ ಕಾರಣದಿಂದಾಗಿ ಸಂಗಾತಿಗಳು ಬೇರೆಯಾದ ಅದೆಷ್ಟೋ ಉದಾಹರಣೆಗಳೂ ಇವೆ. ಆದರೆ ಹೀಗಾಗುವ ಮುನ್ನ ಅದನ್ನು ತಡೆಯುವ ಯಾವುದಾದರೂ ಮಾರ್ಗಗಳಿವೆಯೇ? ಖಂಡಿತ ಇವೆ. ನಿಮ್ಮ ಜೀವನ ಶೈಲಿಯಲ್ಲಿನ ಸಣ್ಣ ಪುಟ್ಟ ಬದಲಾವಣೆಗಳು, ನಿಮ್ಮ ಆಹಾರ ಕ್ರಮದಲ್ಲಿನ ಬದಲಾವಣೆಗಳು ನಿಮ್ಮ ಗೊರಕೆಯ ಸಮಸ್ಯೆಯಿಂದ ಮುಕ್ತಿ ನೀಡಬಲ್ಲುದು. ಅದರಲ್ಲೂ ಆಹಾರ ಕ್ರಮ ಬಹಳ ಪ್ರಮುಖ ಪಾತ್ರವನ್ನು ಪಡೆದಿದೆ.
ಆಹಾರ ಕ್ರಮದಲ್ಲಿನ ಬದಲಾವಣೆಗಳೇ ಗೊರಕೆಯ ಸಮಸ್ಯೆಯನ್ನು ಬಹಳ ಮಟ್ಟಿಗೆ ತಡೆಯಬಹುದು ಎಂದು ಸಂಶೋಧನೆಗಳು ದೃಢಪಡಿಸಿವೆ. ಆಹಾರ ಮತ್ತು ಗೊರಕೆಯ ಸಂಬಂಧದ ಕುರಿತಾದ ಕೆಲವು ಸತ್ಯಗಳು ಇಲ್ಲಿವೆ. ಇದನ್ನು ಅರಿತರೆ ನಿಮ್ಮ ಆಹಾರ ಕ್ರಮ ಹೇಗಿರಬೇಕು ಎಂಬ ಬಗ್ಗೆ ನಿಮಗೆ ಕಲ್ಪನೆ ಮೂಡುತ್ತದೆ.
ರಾತ್ರಿಯ ಆಹಾರ ಮಿತವಾಗಿರಲಿ:
ಹೆಚ್ಚು ಆಹಾರ ಸೇವಿಸಿ ಮಲಗುವ ಅಭ್ಯಾಸ ಒಳ್ಳೆಯದಲ್ಲ. ಆಹಾರ ಸೇವಿಸಿದ ಬಳಿಕ ಸ್ವಲ್ಪ ಹೊತ್ತು ಬೇರೆನಾದರೂ ಚಟುವಟಿಕೆಯಲ್ಲಿ ಸಮಯ ಕಳೆದು ನಂತರ ಮಲಗುವ ಅಭ್ಯಾಸ ಒಳ್ಳೆಯದು. ಊಟವಾದ ಬಳಿಕ ಒಂದು ಸುತ್ತು ತಿರುಗಾಡಿಕೊಂಡು ಬಂದರೆ ಆಹಾರ ಪಚನವಾಗುತ್ತದೆ. ರಾತ್ರಿಯ ಸಮಯದಲ್ಲಿ ಬಹಳ ಹೆಚ್ಚು ಆಹಾರ ಸೇವಿಸುವ ಅಭ್ಯಾಸವನ್ನು ಬಿಟ್ಟರೆ ಒಳ್ಳೆಯದು.
ಜೇನುತುಪ್ಪ:
ಗೊರಕೆಯನ್ನು ತಡೆಯಲು ಜೇನುತುಪ್ಪ ಒಂದು ಪ್ರಭಾವಿ ಆಹಾರವಾಗಿದೆ. ಜೇನುತುಪ್ಪದಲ್ಲಿ ಉರಿಯೂತ ನಿಯಂತ್ರಕ ಹಾಗೂ ಸೂಕ್ಷ್ಮ ಜೀವಿ ನಿಯಂತ್ರಕ ಅಂಶಗಳಿವೆ. ಇವು ನಮ್ಮ ದೇಹದಲ್ಲಿ ಆಮ್ಲಜನಕ ಸಾಗಾಣಿಕೆಯಲ್ಲಿರುವ ಯಾವುದೇ ತರಹದ ತಡೆಗಳನ್ನು ಬಿಡುಗಡೆ ಮಾಡುತ್ತದೆ.
ರವಿಹೊಳ್ಳ
[26/09 11:20 PM] +91 94498 28225: ಸಾಕಷ್ಟು ನಿದ್ದೆ ಮಾಡಿ
ಎಷ್ಟು ಹೊತ್ತು ನಿದ್ದೆ ಮಾಡಬೇಕು ಅನ್ನುವುದು ಒಬ್ಬ ವ್ಯಕ್ತಿಯಿಂದ ಇನ್ನೊಬ್ಬ ವ್ಯಕ್ತಿಗೆ ಭಿನ್ನವಾಗಿರುತ್ತದೆ. ಎಳೇ ಮಗು ದಿನಕ್ಕೆ 16ರಿಂದ 18 ಗಂಟೆ ನಿದ್ದೆ ಮಾಡಿದರೆ, 1ರಿಂದ 3 ವರ್ಷದ ಮಗು 14 ಗಂಟೆ ನಿದ್ದೆ ಮಾಡುತ್ತದೆ. 3ರಿಂದ 5 ವರ್ಷದ ಮಗು 11 ಅಥವಾ 12 ಗಂಟೆ ನಿದ್ದೆ ಮಾಡಬೇಕು. 6ರಿಂದ 12 ವರ್ಷದ ಮಕ್ಕಳು 10 ಗಂಟೆ, ಹದಿವಯಸ್ಕರು 9 ರಿಂದ 10 ಗಂಟೆ ಹಾಗೂ ವಯಸ್ಕರು 7 ರಿಂದ 8 ಗಂಟೆ ನಿದ್ದೆ ಮಾಡಬೇಕು.
ನಿದ್ದೆಯನ್ನು ಕಡೆಗಣಿಸಬಾರದು. ಎಲ್ಲರೂ ಸಾಕಷ್ಟು ನಿದ್ದೆ ಮಾಡಬೇಕು ಎಂದು ತಜ್ಞರು ಹೇಳುತ್ತಾರೆ. ನಿದ್ದೆಯಿಂದ ಏನು ಪ್ರಯೋಜನ?
ಮಕ್ಕಳಲ್ಲಿ ಮತ್ತು ಹದಿಪ್ರಾಯದವರಲ್ಲಿ ಬೆಳವಣಿಗೆಯಾಗುತ್ತದೆ.
ಹೊಸ ವಿಷಯಗಳನ್ನು ಕಲಿಯಲು ಮತ್ತು ಅವನ್ನು ಮನಸ್ಸಿನಲ್ಲಿಟ್ಟುಕೊಳ್ಳಲು ಸಹಾಯವಾಗುತ್ತದೆ.
ದೇಹದ ಬೆಳವಣಿಗೆ ಮತ್ತು ತೂಕವನ್ನು ಸಮತೋಲನದಲ್ಲಿಡುವ ಹಾರ್ಮೋನುಗಳ ಪ್ರಮಾಣ ನಿಯಂತ್ರಣದಲ್ಲಿರುತ್ತದೆ.
ಹೃದಯ ಮತ್ತು ರಕ್ತ ನಾಳಗಳು ಸರಿಯಾಗಿ ಕೆಲಸ ಮಾಡುತ್ತವೆ.
ಕಾಯಿಲೆಗಳು ಬರುವ ಸಾಧ್ಯತೆ ಕಡಿಮೆಯಾಗುತ್ತದೆ.
ಸಾಕಷ್ಟು ನಿದ್ದೆ ಮಾಡದಿದ್ದರೆ ದೇಹದ ತೂಕ ಹೆಚ್ಚಾಗುತ್ತದೆ, ಖಿನ್ನತೆ, ಹೃದ್ರೋಗ, ಸಕ್ಕರೆ ಕಾಯಿಲೆ, ಮತ್ತು ಭೀಕರ ಅಪಘಾತ ನಡೆಯುವ ಸಾಧ್ಯತೆಯಿದೆ. ಈ ಎಲ್ಲ ಅಪಾಯಗಳಿಂದ ದೂರವಿರಲು ಸಾಕಷ್ಟು ನಿದ್ದೆ ಮಾಡಲೇಬೇಕು.
ಆದರೆ ನಿಮಗೆ ನಿದ್ದೆ ಮಾಡಲಿಕ್ಕೇ ಆಗದಿದ್ದರೆ ಏನು ಮಾಡಬೇಕು, ಏನು ಮಾಡಬಾರದು?
ಒಂದೊಂದು ದಿನ ಒಂದೊಂದು ಸಮಯಕ್ಕೆ ಮಲಗುವುದು, ಏಳುವುದು ಮಾಡಬಾರದು.
ನಿಮ್ಮ ಮಲಗುವ ಕೋಣೆಯಲ್ಲಿ ಕತ್ತಲಿರುವಂತೆ, ಶಬ್ದವಿಲ್ಲದೆ ಶಾಂತಿಯಿರುವಂತೆ ಮತ್ತು ತೀರಾ ಸೆಕೆಯೂ ತೀರಾ ಚಳಿಯೂ ಇಲ್ಲದಂತೆ ನೋಡಿಕೊಳ್ಳಿ.
ಮಲಗಿರುವಾಗ ಮೊಬೈಲ್ ಉಪಯೋಗಿಸಬೇಡಿ ಅಥವಾ ಟಿ.ವಿ. ನೋಡಬೇಡಿ.
ನಿಮ್ಮ ಹಾಸಿಗೆಯನ್ನು ನಿಮಗೆ ಹೇಗೆ ಬೇಕೋ ಹಾಗೆ ಸಿದ್ಧಪಡಿಸಿಕೊಳ್ಳಿ.
ಮಲಗುವ ಸಮಯದಲ್ಲಿ ಕಾಫಿ, ಟೀ, ಮದ್ಯ ಸೇವನೆ ಅಥವಾ ಅತಿಯಾದ ಆಹಾರ ಸೇವನೆ ಬೇಡ.
ಈ ಸಲಹೆಗಳನ್ನು ಅನ್ವಯಿಸಿದ ಮೇಲೂ ನಿಮಗೆ ಇನ್ನೂ ನಿದ್ದೆಗೆ ಸಂಬಂಧಿಸಿದ ಸಮಸ್ಯೆ ಇದ್ದರೆ ತಡಮಾಡದೆ ವೈದ್ಯರನ್ನು ಸಂಪರ್ಕಿಸಿ.
[27/09 7:23 AM] +91 94498 28225: ಬೋಜನಂ ಅಮೃತಮಸ್ತ್
________
ಕೈಯಲ್ಲೇ ಊಟ ಮಾಡುವುದರಿಂದ ಆಗುವ ವೈಜ್ಞಾನಿಕ ಲಾಭಗಳು.
ಡೈನಿಂಗ್ ಟೇಬಲ್ ಮೇಲೆ ಸ್ಫೂನ್ಸು, ಫೋರ್ಕ್ಸ್ ಬಂದು ಕೈಯಲ್ಲಿ ಭೋಜನ ಸವಿಯುವವರನ್ನು ಅನಾಗರೀಕರ ತರಹ ನೋಡುವ ಕಾಲ ಇದು. ತಿಂಡಿ ಏನೇ ಇದ್ದರೂ ಫೋರ್ಕ್ ಕಡ್ಡಾಯ ಎಂಬಂತಾಗಿದೆ. ಹೋಟೆಲ್ನಲ್ಲಿ ಯಾರಾದರೂ ಕೈಯಲ್ಲಿ ಊಟ ಮಾಡುತ್ತಿದ್ದರೆ ಅವರನ್ನು ವಿಚಿತ್ರವಾಗಿ ನೋಡುವ ಮನೋಭಾವ ಇದೆ. ಇನ್ನು ಮನೆಯಲ್ಲೂ ಅಷ್ಟೇ ಮಕ್ಕಳಿಗೆ ಸ್ಫೂನ್ ಅಭ್ಯಾಸ ಮಾಡುತ್ತಿದ್ದಾರೆ ತಂದೆತಾಯಿ. ಅದಕ್ಕೆ ಅವರು ಕೊಡುತ್ತಿರುವ ಮುಖ್ಯ ಕಾರಣ…ಕೈಗಳು ಸ್ವಚ್ಛವಾಗಿರಲ್ಲ ಅನ್ನೋದು. ಆದರೆ ಒಮ್ಮೆ ಕೈಯಲ್ಲಿ ಊಟ ಮಾಡುವುದರಿಂದ ಆಗುವ ವೈಜ್ಞಾನಿಕ ಲಾಭಗಳನ್ನು ನೋಡೋಣ. ಇದನ್ನು ಓದಿದ ಮೇಲೆ ನೀವು ಎಲ್ಲೇ ಇರಿ…? ನೀವು ಮಟ್ಟಸವಾಗಿ ಕೈಯನ್ನು ಉಪಯೋಗಿಸಿ ಭೋಜನ ಮಾಡುತ್ತೀರಿ ಎಂದು ಆಶಿಸುತ್ತೇವೆ.
ಕೈಯಲ್ಲಿ ಆಹಾರ ತಿನ್ನಿವುದರಿಂದ ಆಗುವ ಪ್ರಯೋಜನಗಳು: ( As Per Science).
1. ಕೈ ಸ್ಪರ್ಶದಿಂದ ದೇಹದಲ್ಲಿ ಶಕ್ತಿ ಸಂಚಯವಾಗುತ್ತದೆ.
2. ಕೈಯಲ್ಲಿ ಆಹಾರ ತಿನ್ನುವುದರಿಂದ ಕೆಲವು ಮಿಲಿಯನ್ ನರಗಳು ನಮ್ಮ ಮಿದುಳಿಗೆ ಸಂಕೇತ ಕಳುಹಿಸುತ್ತವಂತೆ.
3. ಆಹಾರವನ್ನು ಕೈಯಲ್ಲಿ ಸ್ಪರ್ಶಿಸುತ್ತಿದ್ದಂತೆ, ಆಹಾರ ತೆಗೆದುಕೊಳ್ಳುವ ವಿಷಯ ಮಿದುಳು ಉದರಕ್ಕೆ ಸಂಕೇತ ರವಾನಿಸುತ್ತದೆ. ಆಗ ಹೊಟ್ಟೆಯಲ್ಲಿ ಜೀರ್ಣ ರಸಗಳು, ಎಂಜೈಮ್ಗಳು ಬಿಡುಗಡೆಯಾಗಿ ಜೀರ್ಣಕ್ರಿಯೆ ಸುಗಮವಾಗಿ ಆಗುತ್ತದೆ.
4. ಕೈಯಲ್ಲಿ ಆಹಾರ ತೆಗೆದುಕೊಳ್ಳುವುದರಿಂದ ಆರೋಗ್ಯವಾಗಿರುವುದಷ್ಟೇ ಅಲ್ಲದೆ, ಯಾವುದೇ ಆಲೋಚನೆಗಳು ಬರದೆ ಒಂದೇ ಆಲೋಚನೆಯಲ್ಲಿ ಇರುತ್ತೇವೆ.
5. ನಮ್ಮ ಆಹಾರದಲ್ಲಿ ಎಣ್ಣೆಯನ್ನು ಹೆಚ್ಚಾಗಿ ಬಳಸುತ್ತೇವೆ. ಹೀಗೆ ತಯಾರಿಸಿದ ಆಹಾರವನ್ನು ಸ್ಫೂನ್ಸ್, ಫೋರ್ಕ್ಸ್ನಿಂದ ತಿನ್ನುವುದರಿಂದ ಪ್ರತಿಕ್ರಿಯೆ ಏರ್ಪಟ್ಟು ರುಚಿ ಕೆಡುತ್ತದೆ.
6. ಕೈ ಬೆರಳಲ್ಲಿ ಆಹಾರವನ್ನು ಕಲೆಸಿಕೊಂಡು, ಒಂದೊಂದೇ ತುತ್ತು ತಿನ್ನುವುದರಿಂದ ರಕ್ತಸಂಚಾರ ಚೆನ್ನಾಗಿ ಆಗುತ್ತದೆ.
7. ಕೈಬೆರಳಲ್ಲಿ ಆಹಾರ ತೆಗೆದುಕೊಳ್ಳುವುದರಿಂದ, ಬೆರಳು ತುಟಿಗೆ ತಾಗುತ್ತಿದ್ದಂತೆ ಬಾಯಲ್ಲಿ ಲಾಲಾರಸ ಉತ್ಪನ್ನವಾಗುತ್ತದೆ.
8. ಇನ್ನು ಕೈ ಬೆರಳಲ್ಲಿ ಆಹಾರ ತೆಗೆದುಕೊಳ್ಳುವುದರಿಂದ ಅನಾರೋಗ್ಯ ಪಾಲಾಗದೆ, ಆರೋಗ್ಯವಾಗಿರುತ್ತೇವೆ. ಜೀರ್ಣ ಪ್ರಕ್ರಿಯೆ ಚೆನ್ನಾಗಿ ನಡೆಯುತ್ತದೆ. ಇದು ಒಂದು ರೀತಿ ವ್ಯಾಯಾಮದಂತಿರುತ್ತದೆ.
ಪುರಾಣಗಳ ಪ್ರಕಾರ…
* ಕೈಯಲ್ಲಿರುವ ಒಂದೊಂದು ಬೆರಳು ಒಂದೊಂದು ತತ್ವವನ್ನು ಹೊಂದಿರುತ್ತವೆ.
* ಹೆಬ್ಬೆರಳು: ಅಗ್ನಿತತ್ವ
* ತೋರು ಬೆರಳು: ವಾಯುತತ್ವ
* ಮಧ್ಯ ಬೆರಳು: ಆಕಾಶ
* ಉಂಗುರ ಬೆರಳು: ಭೂಮಿ
* ಕಿರುಬೆರಳು: ಜಲತತ್ವ
ಈ ಐದು ಬೆರಳುಗಳ ಸ್ಪರ್ಶ ಆಹಾರಕ್ಕೆ ತಾಕಿದಾಗ ಜೀವಶಕ್ತಿ ಕೊಟ್ಟಷ್ಟು ಬೆಲೆ… ಸಂಸ್ಕೃತಿಗೆ ಕೊಟ್ಟರೆ…ಮಾನವ ಜೀವನ ಆರೋಗ್ಯಕರ.....
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ