ಗ೦ಟಲಿನ ಕಫ ಹೊರ ಹಾಕಲು ಪರಿಣಾಮ ಕಾರಿ ವಿದಾನ
ನಮಗೆ ಶೀತ ಆದಾಗ ಅಥವಾ ನಮ್ಮ ಉಸಿರಾಟದ ನಾಳದ ಮೇಲ್ಭಾಗದಲ್ಲಿ ಸೋಂಕು ಉಂಟಾದಾಗ, ಕಫ ಉಂಟಾಗುವುದು ಸಾಮಾನ್ಯ. ಇದು ಜೀವಕ್ಕೆ ಕುತ್ತು ತರುವಂತದಲ್ಲ ಎಂದರೂ ಇದನ್ನು ಸರಿಯಾದ ಸಮಯಕ್ಕೆ ತೊಲಗಿಸದಿದ್ದರೆ ಅದು ನಿಮ್ಮ ಶ್ವಾಸಕೋಶದ ನಳಿಕೆಗಳಿಗೆ ತಡೆಯೊಡ್ಡಿ, ಉಸಿರಾಟದ ನಾಳದ ಮೇಲ್ಭಾಗದಲ್ಲಿ ಎರಡನೆಯ ಸೋಂಕು ಹುಟ್ಟು ಹಾಕಬಹದು.
ನಮಗೆ ಶೀತ ಆದಾಗ ಅಥವಾ ನಮ್ಮ ಉಸಿರಾಟದ ನಾಳದ ಮೇಲ್ಭಾಗದಲ್ಲಿ ಸೋಂಕು ಉಂಟಾದಾಗ, ಕಫ ಉಂಟಾಗುವುದು ಸಾಮಾನ್ಯ. ಇದು ಜೀವಕ್ಕೆ ಕುತ್ತು ತರುವಂತದಲ್ಲ ಎಂದರೂ ಇದನ್ನು ಸರಿಯಾದ ಸಮಯಕ್ಕೆ ತೊಲಗಿಸದಿದ್ದರೆ ಅದು ನಿಮ್ಮ ಶ್ವಾಸಕೋಶದ ನಳಿಕೆಗಳಿಗೆ ತಡೆಯೊಡ್ಡಿ, ಉಸಿರಾಟದ ನಾಳದ ಮೇಲ್ಭಾಗದಲ್ಲಿ ಎರಡನೆಯ ಸೋಂಕು ಹುಟ್ಟು ಹಾಕಬಹದು.
ಇಂದು ಈ ಲೇಖನದಲ್ಲಿ ನಾನು ನಿಮಗೆ ಗಂಟಲಿನ ಕಫವನ್ನು ಹೊರಹಾಕಲು ಸುಲಭ ಮತ್ತು ಅತ್ಯಂತ ಪರಿಣಾಮಕಾರಿ ವಿಧಾನಗಳು ಯಾವುಗಳೆಂದು ತಿಳಿಸುತ್ತೇನೆ ಓದಿರಿ.
1. ಉಪ್ಪು ನೀರು
ಒಂದು ಲೋಟದಷ್ಟು ಉಗುರುಬೆಚ್ಚಗಿನ ನೀರಿಗೆ ಕಾಲು ಚಮಚದಷ್ಟು ಉಪ್ಪು ಬೆರೆಸಿ. ಈ ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸಿ. ಇದನ್ನು ದಿನಕ್ಕೆ ಹಲವಾರು ಬಾರಿ ಮಾಡಬೇಕು. ಉಪ್ಪಿಗೆ ಬ್ಯಾಕ್ಟೀರಿಯಾಗಳನ್ನೂ ಕೊಳ್ಳುವ ಸಾಮರ್ಥ್ಯ ಇದ್ದು ಇದು ಸೋಂಕನ್ನು ತಡೆಗಟ್ಟಿ ಕಫ ಹೆಚ್ಚಾಗುವುದನ್ನು ತಡೆಯುತ್ತದೆ.
ಒಂದು ಲೋಟದಷ್ಟು ಉಗುರುಬೆಚ್ಚಗಿನ ನೀರಿಗೆ ಕಾಲು ಚಮಚದಷ್ಟು ಉಪ್ಪು ಬೆರೆಸಿ. ಈ ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸಿ. ಇದನ್ನು ದಿನಕ್ಕೆ ಹಲವಾರು ಬಾರಿ ಮಾಡಬೇಕು. ಉಪ್ಪಿಗೆ ಬ್ಯಾಕ್ಟೀರಿಯಾಗಳನ್ನೂ ಕೊಳ್ಳುವ ಸಾಮರ್ಥ್ಯ ಇದ್ದು ಇದು ಸೋಂಕನ್ನು ತಡೆಗಟ್ಟಿ ಕಫ ಹೆಚ್ಚಾಗುವುದನ್ನು ತಡೆಯುತ್ತದೆ.
2. ಶುಂಠಿ
ಶುಂಠಿಯು ಒಂದು ನೈಸರ್ಗಿಕ ಆಂಟಿಹಿಸ್ಟಾಮೈನ್ ಮತ್ತು ಮೂಗುಕಟ್ಟುವುದರ ನಿವಾರಕ. ಅಲ್ಲದೆ ಇದರಲ್ಲಿ ಶಗೋಲ್ ಎಂಬ ಪದಾರ್ಥವಿದ್ದು ಇದು ಶೀತ ಉಂಟುಮಾಡುವ ವೈರಾಣುಗಳೊಂದಿಗೆ ಹೋರಾಡುತ್ತದೆ. ಶುಂಠಿಯ ವೈರಾಣು-ವಿರೋಧಿ ಮತ್ತು ಬ್ಯಾಕ್ಟೀರಿಯಾ-ವಿರೋಧಿ ಗುಣಗಳೊಂದಿಗೆ, ಇದು ಉಸಿರಾಟವನ್ನು ಸುಲಭ ಕೂಡ ಮಾಡುತ್ತದೆ.
ಶುಂಠಿಯು ಒಂದು ನೈಸರ್ಗಿಕ ಆಂಟಿಹಿಸ್ಟಾಮೈನ್ ಮತ್ತು ಮೂಗುಕಟ್ಟುವುದರ ನಿವಾರಕ. ಅಲ್ಲದೆ ಇದರಲ್ಲಿ ಶಗೋಲ್ ಎಂಬ ಪದಾರ್ಥವಿದ್ದು ಇದು ಶೀತ ಉಂಟುಮಾಡುವ ವೈರಾಣುಗಳೊಂದಿಗೆ ಹೋರಾಡುತ್ತದೆ. ಶುಂಠಿಯ ವೈರಾಣು-ವಿರೋಧಿ ಮತ್ತು ಬ್ಯಾಕ್ಟೀರಿಯಾ-ವಿರೋಧಿ ಗುಣಗಳೊಂದಿಗೆ, ಇದು ಉಸಿರಾಟವನ್ನು ಸುಲಭ ಕೂಡ ಮಾಡುತ್ತದೆ.
ಒಂದು ಶುಂಠಿಯನ್ನು ಚಿಕ್ಕ ತುಂಡುಗಳಾಗಿ ಕತ್ತರಿಸಿ. ನಂತರ ಒಂದು ಚಮಚದಷ್ಟು ಶುಂಠಿಯ ತುಂಡುಗಳನ್ನು ಒಂದು ಲೋಟದಷ್ಟು ಬಿಸಿ ಬಿಸಿ ನೀರಿನಲ್ಲಿ ಹಾಕಿ. ಶುಂಠಿ ನೀರಿನೊಂದಿಗೆ ಬೆರೆಯಲು ಸ್ವಲ್ಪ ಹೊತ್ತು ಬಿಟ್ಟು, ನಂತರ ಅದಕ್ಕೆ ಎರಡು ಚಮಚದಷ್ಟು ಜೇನುತುಪ್ಪ ಬೆರೆಸಿ. ಈ ಮಿಶ್ರಣವನ್ನು ಚೆನ್ನಾಗಿ ಕಲಿಸಿ ದಿನಕ್ಕೆ ಮೂರ್ನಾಲ್ಕು ಬಾರಿ ಸೇವಿಸಿರಿ. ಪರ್ಯಾಯವಾಗಿ ನೀವು ಕೆಲವಷ್ಟು ಶುಂಠಿಯ ತುಂಡುಗಳನ್ನು ಹಾಗೆ ಬಾಯಲ್ಲಿ ಅಗಿಯಬಹುದು.
3. ಮೆಣಸಿನ ಪುಡಿ
ಮೆಣಸು ನಿಮ್ಮ ಗಂಟಲಿನಲ್ಲಿರುವ ಕಫವನ್ನು ಕಡಿಮೆ ಮಾಡಿ ಉಸಿರಾಟಕ್ಕೆ ಸಹಾಯ ಮಾಡುತ್ತದೆ. ಅಷ್ಟೇ ಅಲ್ಲದೆ ಇದು ಕೆಮ್ಮಿನಿಂದ ಉಂಟಾದ ಎದೆ ನೋವು ಮತ್ತು ಗಂಟಲು ಕೆರೆತವನ್ನೂ ಕಡಿಮೆ ಮಾಡುತ್ತದೆ.
ಮೆಣಸು ನಿಮ್ಮ ಗಂಟಲಿನಲ್ಲಿರುವ ಕಫವನ್ನು ಕಡಿಮೆ ಮಾಡಿ ಉಸಿರಾಟಕ್ಕೆ ಸಹಾಯ ಮಾಡುತ್ತದೆ. ಅಷ್ಟೇ ಅಲ್ಲದೆ ಇದು ಕೆಮ್ಮಿನಿಂದ ಉಂಟಾದ ಎದೆ ನೋವು ಮತ್ತು ಗಂಟಲು ಕೆರೆತವನ್ನೂ ಕಡಿಮೆ ಮಾಡುತ್ತದೆ.
ಮೊದಲಿಗೆ ಕಾಲು ಚಮಚದಷ್ಟು ಮೆಣಸಿನ ಪುಡಿ, ಕಾಲು ಚಮಚದಷ್ಟು ತುರಿದ ಶುಂಠಿ, ಒಂದು ಚಮಚದಷ್ಟು ಜೇನುತುಪ್ಪ – ಈ ಮೂರರ ಮಿಶ್ರಣ ಮಾಡಿ. ನಂತರ ಈ ಮಿಶ್ರಣಕ್ಕೆ ಎರಡು ಚಮಚದಷ್ಟು ನೀರನ್ನು ಬೆರೆಸಿ, ಕಲಿಸಿ. ಈ ಮಿಶ್ರಣವನ್ನು ದಿನಕ್ಕೆ 2-3 ಬಾರಿ ಸೇವಿಸುವುದರಿಂದ ಕಫ ಕಡಿಮೆ ಆಗುತ್ತದೆ.
4. ನಿಂಬೆಹಣ್ಣು
ಕಫವನ್ನು ಮತ್ತು ಲೋಳೆಯನ್ನು ಹೋಗಲಾಡಿಸುವುದರಲ್ಲಿ ನಿಂಬೆಹಣ್ಣು ಬಹಳಷ್ಟು ಸಹಾಯ ಮಾಡುತ್ತದೆ. ನಿಂಬೆ ಹಣ್ಣಿನಲ್ಲಿ ಕೇವಲ ಆಂಟಿ-ಬ್ಯಾಕ್ಟೀರಿಯಾ ಗುಣಗಳು ಇರುವದಷ್ಟೇ ಅಲ್ಲದೆ, ಅದರಲ್ಲಿರುವ ವಿಟಮಿನ್ C ನಿಮ್ಮ ದೇಹಕ್ಕೆ ಸೋಂಕಿನ ವಿರುದ್ಧ ಹೋರಾಡಲು ಶಕ್ತಿ ನೀಡುತ್ತದೆ.
ಕಫವನ್ನು ಮತ್ತು ಲೋಳೆಯನ್ನು ಹೋಗಲಾಡಿಸುವುದರಲ್ಲಿ ನಿಂಬೆಹಣ್ಣು ಬಹಳಷ್ಟು ಸಹಾಯ ಮಾಡುತ್ತದೆ. ನಿಂಬೆ ಹಣ್ಣಿನಲ್ಲಿ ಕೇವಲ ಆಂಟಿ-ಬ್ಯಾಕ್ಟೀರಿಯಾ ಗುಣಗಳು ಇರುವದಷ್ಟೇ ಅಲ್ಲದೆ, ಅದರಲ್ಲಿರುವ ವಿಟಮಿನ್ C ನಿಮ್ಮ ದೇಹಕ್ಕೆ ಸೋಂಕಿನ ವಿರುದ್ಧ ಹೋರಾಡಲು ಶಕ್ತಿ ನೀಡುತ್ತದೆ.
ಮೊದಲಿಗೆ ಎರಡು ಚಮಚದಷ್ಟು ನಿಂಬೆರಸವನ್ನು ಒಂದು ಚಮಚದಷ್ಟು ಜೇನುತುಪ್ಪ ಮತ್ತು ಒಂದು ಲೋಟದಷ್ಟು ಕುದಿಸಿದ ನೀರಿಗೆ ಬೆರೆಸಿ. ಈ ಮಿಶ್ರಣವನ್ನು ದಿನಕ್ಕೆ ಮೂರು ಬಾರಿ ಸೇವಿಸಿ. ಇನ್ನೊಂದು ವಿಧಾನ ಎಂದರೆ ನಿಂಬೆಹಣ್ಣನು ಕೇವಲ ಎರಡು ಭಾಗ ಮಾಡಿ. ಒಂದು ತುಂಡಿನ ಮೇಲೆ ಮೆಣಸಿನ ಪುಡಿ ಮತ್ತು ಉಪ್ಪನ್ನು ಉದುರಿಸಿ, ಅದನ್ನು ಚೀಪಿ.
5. ಬೆಳ್ಳುಳ್ಳಿ
ಬೆಳ್ಳುಳ್ಳಿಯಲ್ಲಿ ಬ್ಯಾಕ್ಟೀರಿಯಾ-ವಿರೋಧಿ, ವೈರಾಣು-ವಿರೋಧಿ ಮತ್ತು ಉರಿತ-ವಿರೋಧಿ ಗುಣಗಳಿದ್ದು ಇದು ಉಸಿರಾಟದ ನಾಳದ ಉರಿಯೂತವನ್ನು ಕಡಿಮೆ ಮಾಡುತ್ತದೆ. ನೀವು ಕಫವನ್ನು ನಿರ್ಮೂಲನೆ ಮಾಡಲು ಬೆಳ್ಳುಳ್ಳಿ ಚೆನ್ನಾಗಿ ಜೇಜ್ಜಿಕೊಳ್ಳಿ. ಈ ಜೇಜ್ಜಿದ ಬೆಳ್ಳುಳ್ಳಿಯ ಎಸಳುಗಳನ್ನು ಬೆಳಗ್ಗೆ ಎದ್ದೊಡನೆ ಮತ್ತು ಮಲಗುವ ಮುನ್ನ ನೀರಿನೊಂದಿಗೆ ಸೇವಿಸಿ.
ಬೆಳ್ಳುಳ್ಳಿಯಲ್ಲಿ ಬ್ಯಾಕ್ಟೀರಿಯಾ-ವಿರೋಧಿ, ವೈರಾಣು-ವಿರೋಧಿ ಮತ್ತು ಉರಿತ-ವಿರೋಧಿ ಗುಣಗಳಿದ್ದು ಇದು ಉಸಿರಾಟದ ನಾಳದ ಉರಿಯೂತವನ್ನು ಕಡಿಮೆ ಮಾಡುತ್ತದೆ. ನೀವು ಕಫವನ್ನು ನಿರ್ಮೂಲನೆ ಮಾಡಲು ಬೆಳ್ಳುಳ್ಳಿ ಚೆನ್ನಾಗಿ ಜೇಜ್ಜಿಕೊಳ್ಳಿ. ಈ ಜೇಜ್ಜಿದ ಬೆಳ್ಳುಳ್ಳಿಯ ಎಸಳುಗಳನ್ನು ಬೆಳಗ್ಗೆ ಎದ್ದೊಡನೆ ಮತ್ತು ಮಲಗುವ ಮುನ್ನ ನೀರಿನೊಂದಿಗೆ ಸೇವಿಸಿ.
ನಿಮ್ಮ ಮೂಗಿನಲ್ಲಿ ಕಟ್ಟಿಕೊಂಡಿರುವ ಲೋಳೆಯನ್ನು ಹೋಗಲಾಡಿಸಬೇಕೆಂದರೆ ಬೆಳ್ಳುಳ್ಳಿಯನ್ನು ಹಿಂಡಿ ಅದರ ರಸ ತೆಗಿಯಿರಿ. ನಂತರ ಈ ಬೆಳ್ಳುಳ್ಳಿ ರಸವನ್ನು ಒಂದು ಲೋಟದಷ್ಟು ನೀರಿನೊಂದಿಗೆ ಬೆರೆಸಿ. ಈ ಮಿಶ್ರಣದ ಕೆಲವು ಹನಿಗಳನ್ನು ನಿಮ್ಮ ಮೂಗಿನೊಳಗೆ ಬಿಟ್ಟುಕೊಳ್ಳಿ. ಇದು ಕಟ್ಟಿಕೊಂಡಿರುವ ಲೋಳೆಯನ್ನು ನೀರು ಮಾಡಿ ಅದು ಆಚೆ ಬರುವಂತೆ ಮಾಡುತ್ತದೆ
ಹಲವರು ತಿಳಿದಿರುವಂತೆ ಅತಿಯಾದ ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡಿದರೆ ಸಕ್ಕರೆ ಕಾಯಿಲೆ ಬರುತ್ತದೆ ಎಂಬುದು ತಪ್ಪು ಅಭಿಪ್ರಾಯ. ಆದರೆ ಅತಿಯಾದ ಕೊಬ್ಬಿನ ಅಂಶವಿರುವ ಆಹಾರ ಸೇವನೆಯಿಂದ ಸಕ್ಕರೆ ಕಾಯಿಲೆ ಬೇಗನೆ ಬರಬಹುದು. ಯಾವುದೇ ವ್ಯಕ್ತಿಯ ಆಹಾರದಲ್ಲಿ ಅತಿಯಾದ ಕೊಬ್ಬಿನ ಅಂಶ ಮತ್ತು ಸಕ್ಕರೆಯ ಅಂಶವೂ ಅಧಿಕವಾಗಿದ್ದರೆ, ಹಾಗೂ ಬಹಳ ವರ್ಷಗಳ ಕಾಲ ಅದೇ ಪದ್ದತಿಯನ್ನು ಅನುಸರಿಸುತ್ತಿದ್ದರೆ ೩೦ ವರ್ಷ ವಯಸ್ಸು ಪ್ರಾರಂಭವಾಗುತ್ತಿಂದಂತೆಯೇ ಸಕ್ಕರೆ ಕಾಯಿಲೆಯ ರೋಗ ಲಕ್ಷಣ ಕಂಡುಬರುತ್ತದೆ.
ಮೂಲವ್ಯಾಧಿ ಎಂಬುದು ಗುದದ್ವಾರದಲ್ಲಿರುವ ರಕ್ತನಾಳಗಳ ಒತ್ತಡ ಉಂಟಾಗಿ ಅವು ಬಾತು ನೋವು/ ಸ್ರಾವವನ್ನು ಉಂಟುಮಾಡುವ ರೋಗ. ಇದರ ಮುಖ್ಯ ಕಾರಣ ಅಗ್ನಿಮಾಂದ್ಯ, ಅಜೀರ್ಣ, ಮಲಬದ್ಧತೆ, ಆಹಾರದ ಅಸಮ್ಯಕ, ಅನಿಯ ಮಿತ ಆಹಾರ ಸೇವನೆ, ಬೊಜ್ಜು, ಹೆಚ್ಚು ಕುಳಿತು ಕೆಲಸ (ಅವ್ಯಾಯಮ). ಮಲಬದ್ದತೆ ಯಿಂದ ಸಮಸ್ಯೆ ಶುರುವಾಗಿ ನೋವು, ಮಲ ವಿಸರ್ಜನೆ ವೇಳೆ ರಕ್ತ ಸ್ರಾವ ಕಾಣಿಸಿಕೊಳ್ಳುವುದು. ಆರ್ಯುವೇದದಲ್ಲಿ ಇದಕ್ಕೆ ಔಷಧಿ, ಆಹಾರ, ವಿಹಾರಗಳ ಮೂಲಕ ಸಂಪೂರ್ಣ ಪರಿಹಾರ ಸೂಚಿಸಲಾಗಿದೆ.
ಆಯುರ್ ಔಷಧ
ಮೂಲವ್ಯಾಧಿ ಮೊಳಕೆಗಳು ಗಾತ್ರದಲ್ಲಿ ದೊಡ್ಡದಾಗಿದ್ದರೆ ಕ್ಷಾರ ಸೂತ್ರದ ಚಿಕಿತ್ಸೆ ಅತ್ಯಂತ ಪರಿಣಾಮಕಾರಿ
ತ್ರಿಫಲ ಚೂರ್ಣ, ಅವಿಪತ್ತಿಕರ ಚೂರ್ಣ ಉತ್ತಮ
ಹರಳೆಣ್ಣೆಯನ್ನು ಬಿಸಿ ಹಾಲಿನ ಜೊತೆಗೆ ಸೇವಿಸಿದರೆ ಮೂಲವ್ಯಾಧಿಯನ್ನು ದೂರವಿಡಬಹುದು
ಅಮೃತ ಬಳ್ಳಿಯ ಕಷಾಯ ಉತ್ತಮ ಪೇಯ
ಆಹಾರ ಹೇಗಿರಬೇಕು?
ಪಥ್ಯ: ಹೆಚ್ಚು ನೀರನ್ನು ಸೇವಿಸುವುದು, ಮಜ್ಜಿಗೆ, ಬೆಣ್ಣೆ, ಅಂಜೂರ ಹಣ್ಣು, ಪಪ್ಪಾಯ, ನೇರಳೆ ಹಣ್ಣು, ಹೆಚ್ಚು ನಾರಿನ ಅಂಶ ಇರುವ ಆಹಾರ, ಸಬ್ಬಸಿಗೆ ಸೊಪ್ಪು, ಮೆಂತ್ಯೆ ಸೊಪ್ಪು, ಹಾಗಲ, ಸೋರೆಕಾಯಿ, ಹೀರೆಕಾಯಿ, ಪಡವಲ, ಮೂಲಂಗಿ, ಕರಿಬೇವು ಹೆಚ್ಚಾಗಿ ಸೇವಿಸಿ.
ಅಪಥ್ಯ: ಮಾಂಸ, ಮೊಟ್ಟೆ, ಮೀನು, ಆಲೂಗಡ್ಡೆ, ಬಟಾಣಿ, ಮೈದಾ ಪದಾರ್ಥ, ಜಂಕ್ ಆಹಾರ.
ವಿಹಾರ: ವ್ಯಾಯಾಮ, ಪ್ರಸನ್ನತೆ.
ಆಯುರ್ ಔಷಧ
ಮೂಲವ್ಯಾಧಿ ಮೊಳಕೆಗಳು ಗಾತ್ರದಲ್ಲಿ ದೊಡ್ಡದಾಗಿದ್ದರೆ ಕ್ಷಾರ ಸೂತ್ರದ ಚಿಕಿತ್ಸೆ ಅತ್ಯಂತ ಪರಿಣಾಮಕಾರಿ
ತ್ರಿಫಲ ಚೂರ್ಣ, ಅವಿಪತ್ತಿಕರ ಚೂರ್ಣ ಉತ್ತಮ
ಹರಳೆಣ್ಣೆಯನ್ನು ಬಿಸಿ ಹಾಲಿನ ಜೊತೆಗೆ ಸೇವಿಸಿದರೆ ಮೂಲವ್ಯಾಧಿಯನ್ನು ದೂರವಿಡಬಹುದು
ಅಮೃತ ಬಳ್ಳಿಯ ಕಷಾಯ ಉತ್ತಮ ಪೇಯ
ಆಹಾರ ಹೇಗಿರಬೇಕು?
ಪಥ್ಯ: ಹೆಚ್ಚು ನೀರನ್ನು ಸೇವಿಸುವುದು, ಮಜ್ಜಿಗೆ, ಬೆಣ್ಣೆ, ಅಂಜೂರ ಹಣ್ಣು, ಪಪ್ಪಾಯ, ನೇರಳೆ ಹಣ್ಣು, ಹೆಚ್ಚು ನಾರಿನ ಅಂಶ ಇರುವ ಆಹಾರ, ಸಬ್ಬಸಿಗೆ ಸೊಪ್ಪು, ಮೆಂತ್ಯೆ ಸೊಪ್ಪು, ಹಾಗಲ, ಸೋರೆಕಾಯಿ, ಹೀರೆಕಾಯಿ, ಪಡವಲ, ಮೂಲಂಗಿ, ಕರಿಬೇವು ಹೆಚ್ಚಾಗಿ ಸೇವಿಸಿ.
ಅಪಥ್ಯ: ಮಾಂಸ, ಮೊಟ್ಟೆ, ಮೀನು, ಆಲೂಗಡ್ಡೆ, ಬಟಾಣಿ, ಮೈದಾ ಪದಾರ್ಥ, ಜಂಕ್ ಆಹಾರ.
ವಿಹಾರ: ವ್ಯಾಯಾಮ, ಪ್ರಸನ್ನತೆ.
ಮನೆ ಮದ್ದು :
* ಲೋಳೆರಸದ ತಿರುಳನ್ನು ಒಂದು ಚಮಚೆಯಷ್ಟನ್ನು ದಿನಕ್ಕೆ ಮೂರು ಬಾರಿ ಸೇವಿಸಬೇಕು.
* ಮುಟ್ಟಿದರೆ ಮುನಿ (ನಾಚಿಕೆ ಮುಳ್ಳು) ಇಡೀ ಸಸ್ಯವನ್ನು ಒಣಗಿಸಿ ಪುಡಿ ಮಾಡಿ ಒಂದು ಲೋಟ ನೀರಿಗೆ ಒಂದು ಚಮಚೆ ಪುಡಿ ಬೆರೆಸಿ ಖಾಲಿ ಹೊಟ್ಟೆಗೆ ದಿನಕ್ಕೆರಡು ಬಾರಿ ಊಟಕ್ಕೆ ಮುಂಚೆ ಸೇವಿಸಬೇಕು.
* ಹಾಲಿನಲ್ಲಿ ಒಣ ಖರ್ಜೂರ / ಉತ್ತುತ್ತಿ ರಾತ್ರಿ ಹೊತ್ತು ನೆನೆಯಿಸಿಟ್ಟು ಬೆಳಿಗ್ಗೆ ತಿನ್ನಬೇಕು ಮತ್ತು ಆ ಹಾಲನ್ನು ಕುಡಿಯಬೇಕು.
* 50 ಮಿಲಿ ಈರುಳ್ಳಿ ರಸವನ್ನು ಸಿಹಿ ಮಜ್ಜಿಗೆಯಲ್ಲಿ ಬೆರೆಸಿ ಊಟದ ನಂತರ ಕುಡಿಯಬೇಕು.
* ಹೊನಗೊನೆ ಸೊಪ್ಪಿನ ರಸ 20 ಮಿಲಿ, ಮೂಲಂಗಿ ಸೊಪ್ಪಿನ ರಸ 20 ಮಿಲಿ ಮತ್ತು ಒಂದು ಚಿಟಿಕೆ ಸೈಂಧವ ಲವಣ ಸೇರಿಸಿ ಪ್ರತಿದಿನ ಎರಡು ಹೊತ್ತು ಎರಡು- ಮೂರು ವಾರ ಕುಡಿಯಬೇಕು.
* ಸುವರ್ಣ ಗೆಡ್ಡೆಯನ್ನು ಹೋಳು ಮಾಡಿ ಒಣಗಿಸಿ ಕುಟ್ಟಿ ಪುಡಿ ಮಾಡಿ ಈ ಪುಡಿಯನ್ನು 5 ಗ್ರಾಂನಷ್ಟನ್ನು ತುಪ್ಪ, ಜೇನುತುಪ್ಪ, ಬೆಲ್ಲ ಯಾವುದಾದರೊಂದರಲ್ಲಿ ಬೆರೆಸಿ ತಿನ್ನಬೇಕು.
* ತುಳಸೀ ಬೀಜದ ಪುಡಿ 10 ಗ್ರಾಂ ಮತ್ತು ಒಂದು ಚಮಚ ಬೆಣ್ಣೆ ಬೆರೆಸಿ ಅದಕ್ಕೆ ಸ್ವಲ್ಪ ಬೆಲ್ಲ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಬೇಕು.
* ಅಳಲೆಕಾಯಿ ಪುಡಿಯನ್ನು ಬೆಲ್ಲ ಸೇರಿಸಿ ತಿನ್ನಬೇಕು.
* 25 ಮಿಲಿ ಮೂಲಂಗಿ ರಸವನ್ನು ಮತ್ತು ಮಜ್ಜಿಗೆಯಲ್ಲಿ ಬೆರೆಸಿ ಕುಡಿಯಬೇಕು.
* ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಂಡು ತುಪ್ಪದಲ್ಲಿ ಹುರಿದು ಅನ್ನದೊಂದಿಗೆ ಸೇವಿಸಬೇಕು.
* ಒಂದು ಚಮಚೆ ನೆಲ್ಲಿಕಾಯಿ ಪುಡಿಯನ್ನು ಮೊಸರಿನಲ್ಲಿ ಬೆರೆಸಿ ಸೇವಿಸಬೇಕು.
* ಸೌತೆಕಾಯಿ ರಸ ಮತ್ತು ಮಜ್ಜಿಗೆಯಲ್ಲಿ ಬೆರೆಸಿ ಕುಡಿಯಬೇಕು.
* 20 ಗ್ರಾಂ ಕೊತ್ತಂಬರಿ ಬೀಜ (ಧನಿಯ)ವನ್ನು ಪುಡಿ ಮಾಡಿ 4 ಲೋಟ ನೀರು ಹಾಕಿ ಕಷಾಯಕ್ಕಿಟ್ಟು ಒಂದು ಲೋಟಕ್ಕಿಳಿಸಿ ಶೋಧಿಸಿ ಹಾಲು, ಸಕ್ಕರೆ ಸೇರಿಸಿ ಪ್ರತಿದಿನ ಎರಡು ಹೊತ್ತು ಸೇವಿಸಬೇಕು.
*ಆಗ ತಾನೇ ಕರೆದ ಹಾಲಿಗೆ ಒಂದು ನಿಂಬೆ ಹಣ್ಣಿನ ರಸ ಸೇರಿಸಿ ದಿನವೂ ಕುಡಿಯುವುದರಿಂದ ಮೂಲವ್ಯಾಧಿ ಗುಣವಾಗುತ್ತದೆ.
* ಮೂಲವ್ಯಾಧಿ ಇರುವವರು ದಿನವೂ ಮಲಗುವ ಮುನ್ನ ಏಲಕ್ಕಿ ಪುಡಿಯೊಂದಿಗೆ ಬಾಳೆಹಣ್ಣನ್ನು ಸೇವಿಸುವುದರಿಂದ ಗುಣವಾಗುತ್ತದೆ.
*ಲೋಳೆಸರದ ರಸವನ್ನು ದಿನಕ್ಕೆ ಮೂರು ಬಾರಿಯಂತೆ ಸೇವಿಸಿ. ಜೇನು ಮತ್ತು ಅದರ ಅರ್ಧದಷ್ಟು ಹರಳೆಣ್ಣೆ ಸೇರಿಸಿ ಸೇವಿಸಿದರೆ ಮೂಲವ್ಯಾಧಿ ಉಪಶಮನವಾಗುವುದು.
*ಮಾವಿನ ಗೊರಟ ಸಂಗ್ರಹಿಸಿ ನೆರಳಲ್ಲಿ ಒಣಗಿಸಿ ಪುಡಿಮಾಡಿ ಇಡುತ್ತಾರೆ. ಈ ಪುಡಿ ಆಯುರ್ವೇದ ಅಂಗಡಿಯಲ್ಲೂ ಸಿಗುತ್ತದೆ. ಅದರ ಪೌಡರ ದಿನಕ್ಕೆ ಎರಡು ಚಮಚೆ ಮುಂಜಾನೆ ಸಂಜೆ ಜೇನಿನೊಡನೆ ಸೇವಿಸಿ.
*ರಕ್ತಸ್ರಾವವಿದ್ದ ಮೂಲವ್ಯಾಧಿಗೆ ನೀರಲ ಹಣ್ಣು ಬಹಳ ಒಳ್ಳೆಯದು.
* ಮೂಲಂಗಿಯನ್ನು ಹೆರೆದು ಮೊಸರಲ್ಲಿ ಕಲಸಿ ಸ್ವಲ್ಪ ಉಪ್ಪು ಹಾಗೂ ನಿಂಬೆರಸ ಬೆರೆಸಿ ಒಗ್ಗರಣೆ ಕೊಟ್ಟರೆ ಬಹಳ ರುಚಿಕರವಾಗಿರುತ್ತದೆ. ಅದು ಮೂಲವ್ಯಾಧಿಗೆ ಬಹಳ ಒಳ್ಳೆಯದು.
*ಹಾಲಿನಲ್ಲಿ ಬೆರಸಿ ಮೂಲಂಗಿಯನ್ನು ಅರೆದು ಪೇಸ್ಟ ಮಾಡಿ ಗುದದ್ವಾರದ ಸುತ್ತಲೂ ಹಚ್ಚಿದರೆ ಬಾವು ಕಡಿಮೆ ಆಗುತ್ತದೆ.
*ಎಂಟು ಗ್ಲಾಸು ನೀರು ದಿನಕ್ಕೆ ಕುಡಿಯುವುದು ಕಡ್ಡಾಯ. ನೀರು ಕಡಿಮೆ ಕುಡಿಯುವವರಿಗೇ ಮಲಬದ್ಧತೆ ಆಗುತ್ತದೆ.
*ಎರಡು ತೊಲೆಯಷ್ಟು ಬಿಲ್ವಪತ್ರದ ರಸವನ್ನು ನಿತ್ಯ ಸೇವಿಸುವುದು.
*ಪ್ರತಿದಿನ ಬೆಳಗ್ಗೆ ಎರಡೂವರೆ ತೊಲೆಯಷ್ಟು ಮೂಲಂಗಿ ರಸವನ್ನು ಮಜ್ಜಿಗೆಯಲ್ಲಿ ಸೇರಿಸಿ ಕುಡಿಯುವುದು. ರಕ್ತಸ್ರಾವ ಬರಿಸುವ ಮೊಳಕೆಗಳ ನಿವಾರಣೆಗೆ ಡೋಣಿ ಸ್ನಾನ (ಟಬ್-ಬಾಥ್), ಖರ್ಜೂರದ ಬೀಜಗಳನ್ನು ಕುಟ್ಟಿ ಒಣಗಿಸಿ ಕೆಂಡದ ಮೇಲೆಹಾಕಿ ಅದರ ಹೊಗೆಯನ್ನು ಮೂಲವ್ಯಾಧಿಯ ಮೊಳಕೆಗಳಿಗೆ ತಾಗುವಂತೆ ಮಾಡಬೇಕು.
*ಹುಣಸೆ ಚಿಗುರು ಮತ್ತು ಎಳೆ ಮಾವಿನಕಾಯಿಯನ್ನು ಬೇಯಿಸಿಕೊಂಡು ತಿಂದರೆ ಮೂಲವ್ಯಾಧಿ ಗುಣವಾಗುವುದು.
*ಮೂಲವ್ಯಾಧಿಯಿಂದ ಬಳಲುವವರು ಮೂರು ಅಂಜೂರದ ಹಣ್ಣುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ಕೂಡಲೇ ಹಣ್ಣುಗಳನ್ನು ತಿಂದು ಆ ನೀರು ಕುಡಿದರೆ ಗುಣವಾಗುವುದು.
*ಸುವರ್ಣ ಗೆಡ್ಡೆಯನ್ನು ಸಣ್ಣದಾಗಿ ಕತ್ತರಿಸಿ ಒಣಗಿಸಿ ಪುಡಿಮಾಡಬೇಕು . ಎರಡು ಚಮಚ ಪುಡಿಗೆ ಎರಡು ಚಮಚ ಸಕ್ಕರೆ ಬೆರೆಸಿ ಬೆಳಗ್ಗೆ – ರಾತ್ರಿ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು.
*ಬಿಲ್ವ ಪತ್ರೆಯ ರಸವನ್ನು ನಿತ್ಯ ಬೆಳಗ್ಗೆ ೫-೬ ಚಮಚ ಸೇವಿಸಬೇಕು.
*ಚನ್ನಾಗಿ ಹಣ್ಣಾದ ಬಾಳೆಹಣ್ಣಿಗೆ ಏಲಕ್ಕಿಯನ್ನು ಹುದುಗಿಸಿಟ್ಟು ತಿನ್ನಬೇಕು.
*ಎಳೆ ಮೂಲಂಗಿಯನ್ನು ನಿತ್ಯ ಸೇವಿಸಿದರೆ ಒಳ್ಳೆಯದು. ೬ ಚಮಚ ಮೂಲಂಗಿ ರಸವನ್ನು ೬ ಚಮಚ ಮಜ್ಜಿಗೆಯಲ್ಲಿ ಬೆರೆಸಿ ಕುಡಿಯಬೇಕು.
*೨ ಚಮಚ ಬಿಳಿ ಎಳ್ಳು , ೨ ಚಮಚ ಕಲ್ಲು ಸಕ್ಕರೆ , ೨ ಚಮಚ ಹಸುವಿನ ಬೆಣ್ಣೆಯನ್ನು ಅರೆದು ನಿತ್ಯ ಬೆಳಗ್ಗೆ ಸೇವಿಸಬೇಕು.
*ರಾತ್ರಿ ೧ ಲೋಟ ನೀರಿಗೆ ೬ ಚಮಚ ಗರಿಕೆಯ ರಸ ಹಾಕಿ ಇಡಬೇಕು. ಮರುದಿನ ಬೆಳಗ್ಗೆ ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಇದರಿಂದ ರಕ್ತ ಬೀಳುವುದು ನಿಲ್ಲುತ್ತದೆ. ಇದನ್ನು ೧೫ ರಿಂದ ೩೦ ದಿನಗಳ ಕಾಲ ಕುಡಿಯಬೇಕು. ಹೀಗೆ ಮಾಡಿದರೆ ದೇಹ ತಂಪಾಗುತ್ತದೆ.
*ಎಕ್ಕದ ಹಾಲಿಗೆ ಅರಿಶಿನ ಬೆರೆಸಿ ಮೂಲವ್ಯಾಧಿಯ ಮೊಳಕೆಗೆ ಹಚ್ಚಿದರೆ ಶಮನವಾಗುತ್ತದೆ.
*ಎಕ್ಕದ ಎಲೆ ಹಾಗೂ ನುಗ್ಗೆ ಸೊಪ್ಪನ್ನು ಅರೆದು ಮೊಳಕೆಗೆ ಹಚ್ಚಿದರೆ ಗುಣವಾಗುತ್ತದೆ.
*ನುಗ್ಗೆ ಸೊಪ್ಪು ಮತ್ತು ಮೂಲಂಗಿ ಸೊಪ್ಪನ್ನು ಅರೆದು ಹಚ್ಚಿದರೆ ಮೊಳಕೆಯ ನೋವ್ವು ಗುಣವಾಗುತ್ತದೆ.
*೪-೫ ಚಮಚ ಈಸಬ್ಗೋಲನ್ನು (ತಂಪಿನ ಬೀಜ) ಹುಡಿಮಾಡಬೇಕು. ಇದನ್ನು ತಣ್ಣೀರಿನಲ್ಲಿ ಅಥವಾ ಹಾಲಿನಲ್ಲಿ ನೆನೆಸಿಟ್ಟು ಊಟದ ೧ ಗಂಟೆ ಮೊದಲು ಕುಡಿದರೆ ಮೊಳಕೆ ಯುಳ್ಳ ಮೂಲವ್ಯಾಧಿ ಹಾಗೂ ರಕ್ತ ಮೂಲವ್ಯಾದಿ ಎರಡೂ ಶಮನವಾಗುತ್ತವೆ.
* ಲೋಳೆರಸದ ತಿರುಳನ್ನು ಒಂದು ಚಮಚದಷ್ಟು ದಿನಕ್ಕೆ ಮೂರು ಬಾರಿ ಸೇವಿಸಬೇಕು. ಜೇನು ಮತ್ತು ಅದರ ಅರ್ಧದಷ್ಟು ಹರಳೆಣ್ಣೆ ಸೇರಿಸಿ ಸೇವಿಸಿದರೆ ಮೂಲವ್ಯಾಧಿ ಉಪಶಮನವಾಗುವುದು. ನಂತರ ಮಲುಗುವ ಮುನ್ನ ಒಂದು ಚಮಚ ಏಲಕ್ಕಿ ಮತ್ತು ಬಾಳೆ ಹಣ್ಣು ತಿನ್ನಬೇಕು. ಲೋಳೆಸರದ ತಿರುಳಿಗೆ ಹರಳೆಣ್ಣೆ ಬೆರೆಸಿ ರಾತ್ರಿ ಹೊತ್ತು ಮತ್ತು ಬೆಳಿಗ್ಗೆ ಮಲವಿಸರ್ಜನೆಯ ಮುಂಚೆ ಮತ್ತು ನಂತರದ ಸಮಯದಲ್ಲಿ ಹಚ್ಚಿದರೆ ಮಲವಿಸರ್ಜನೆಗೆ ಕಷ್ಟವಾಗುವುದಿಲ್ಲ. ಇದರಿಂದ ನೋವು ಉಂಟಾಗುವುದಿಲ್ಲ.
* ಹಾಲಿನಲ್ಲಿ ಒಣ ಖರ್ಜೂರ ಅಥವಾ ಉತ್ತುತ್ತೆಯನ್ನು ರಾತ್ರಿಯಲ್ಲಿ ನೆನೆಯಿಟ್ಟು ಬೆಳಗ್ಗೆ ತಿನ್ನಬೇಕು.
* ಒಂದು ಈರುಳ್ಳಿಯನ್ನು ಪೇಸ್ಟ್ ರೀತಿ ಮಾಡಿ ಅದನ್ನು ಸಿಹಿ ಮಜ್ಜಿಗೆಯಲ್ಲಿ ಬೆರೆಸಿ ಊಟದ ನಂತರ ಕುಡಿಯಬೇಕು.
* ಮೂಲಂಗಿ ಸೊಪ್ಪಿನ ರಸಕ್ಕೆ ಚಿಟಿಕೆಯಷ್ಟು ಸೈಂಧವ ಲವಣ ಸೇರಿಸಿ ಪ್ರತಿದಿನ ಎರಡು ಬಾರಿಯಂತೆ ಎರಡರಿಂದ ಮೂರು ವಾರ ಕುಡಿದರೆ ಮೂಲವ್ಯಾಧಿ ಗುಣವಾಗುವುದು. ಮೂಲಂಗಿ ರಸವನ್ನು ಮತ್ತು ಮಜ್ಜಿಗೆಯಲ್ಲಿ ಬೆರೆಸಿ ಕುಡಿಯುವುದು ಕೂಡ ಒಳ್ಳೆಯದು.
* ಸುವರ್ಣ ಗೆಡ್ಡೆಯನ್ನು ಸಿಪ್ಪೆ ತೆಗೆದು ಒಣಗಿಸಿ ಕುಟ್ಟಿ ಪುಡಿ ಮಾಡಿ, ಆ ಪುಡಿಯನ್ನು ಪ್ರತಿ ದಿನ ಒಂದು ಚಮಚದಂತೆ ಜೇನುತುಪ್ಪಬೆರೆಸಿ ತಿನ್ನುವುದು ಒಳ್ಳೆಯದು.
* ಹುಣಸೆ ಹಣ್ಣಿನ ಮರದ ಚಿಗುರು ಚಿಗುರು ಮತ್ತು ಎಳೆ ಮಾವಿನಕಾಯಿಯನ್ನು ಬೇಯಿಸಿಕೊಂಡು ತಿಂದರೆ ಮೂಲವ್ಯಾಧಿ ಗುಣವಾಗುವುದು.
* ತುಳಸಿ ಬೀಜದ ಪುಡಿ 10 ಗ್ರಾಂ ಮತ್ತು ಒಂದು ಚಮಚ ಬೆಣ್ಣೆ ಬೆರೆಸಿ ಅದಕ್ಕೆ ಸ್ವಲ್ಪ ಬೆಲ್ಲ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಬೇಕು.
* ಈರುಳ್ಳಿಯನ್ನು ಚಿಕ್ಕದಾಗಿ ಕತ್ತರಿಸಿ ಅದನ್ನು ತುಪ್ಪದಲ್ಲಿ ಹುರಿದು ಅನ್ನದೊಂದಿಗೆ ಸೇವಿಸಬೇಕು.
* ಒಂದು ಚಮಚ ನೆಲ್ಲಿಕಾಯಿ ಪುಡಿಯನ್ನು ಮೊಸರಿನಲ್ಲಿ ಬೆರೆಸಿ ಸೇವಿಸಬೇಕು.
* ಸೌತೆಕಾಯಿ ರಸವನ್ನು ಮಜ್ಜಿಗೆಯಲ್ಲಿ ಬೆರೆಸಿ ಕುಡಿಯಬೇಕು.
* 4 ಚಮಚ ಕೊತ್ತಂಬರಿಯನ್ನು 4 ಲೋಟ ನೀರು ಹಾಕಿ ಕುದಿಸಿ ಹಾಲು ಮತ್ತು ಸಕ್ಕರೆ ಹಾಕಿ ಟೀ ಬದಲು ಕುಡಿಯುವುದು ಒಳ್ಳೆಯದು. ಆಗ ತಾನೇ ಕರೆದ ಹಾಲಿಗೆ ಸ್ವಲ್ಪ ನಿಂಬೆ ಹಣ್ಣಿನ ರಸ ಹಾಕಿ ಕುಡಿದರೆ ಮೂಲವ್ಯಾಧಿ ಗುಣಮುಖವಾಗುವುದು.
* ಮೂಲವ್ಯಾಧಿ ಇರುವವರು ದಿನವೂ ಮಲಗುವ ಮುನ್ನ ಏಲಕ್ಕಿ ಪುಡಿಯೊಂದಿಗೆ ಬಾಳೆಹಣ್ಣನ್ನು ಸೇವಿಸುವುದರಿಂದ ಗುಣವಾಗುತ್ತದೆ.
* ಮಾವಿನ ಗೊರಟ ಸಂಗ್ರಹಿಸಿ ನೆರಳಲ್ಲಿ ಒಣಗಿಸಿ ಪುಡಿಮಾಡಿ ಇಡುತ್ತಾರೆ. ಈ ಪುಡಿ ಆಯುರ್ವೇದ ಅಂಗಡಿಯಲ್ಲೂ ಸಿಗುತ್ತದೆ. ಅದರ ಪುಡಿಯನ್ನು ದಿನಕ್ಕೆ ಎರಡು ಚಮಚದಂತೆ ಮುಂಜಾನೆ ಮತ್ತು ಸಂಜೆ ಜೇನಿನೊಡನೆ ಸೇವಿಸಿ.
* ರಕ್ತಸ್ರಾವವಿದ್ದ ಮೂಲವ್ಯಾಧಿಗೆ ನೇರಳೆ ಹಣ್ಣು ಬಹಳ ಒಳ್ಳೆಯದು. ಮೂರು ಅಂಜೂರದ ಹಣ್ಣುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ಕೂಡಲೇ ಹಣ್ಣುಗಳನ್ನು ತಿಂದು ಆ ನೀರು ಕುಡಿದರೆ ಮೂಲವ್ಯಾಧಿ ಗುಣವಾಗುವುದು.
* ಮೂಲಂಗಿಯನ್ನು ತುರಿದು ಮೊಸರಿನಲ್ಲಿ ಕಲೆಸಿ ಸ್ವಲ್ಪ ಉಪ್ಪು ಹಾಗೂ ನಿಂಬೆರಸ ಬೆರೆಸಿ ಒಗ್ಗರಣೆ ಕೊಟ್ಟು, ಈ ಪದಾರ್ಥವನ್ನು ಅನ್ನದ ಜೊತೆ ತಿನ್ನುವುದು ಒಳ್ಳೆಯದು. ಮೂಲಂಗಿಯನ್ನು ಅರೆದು ಪೇಸ್ಟ್ ಮಾಡಿ ಹಾಲಿನಲ್ಲಿ ಮಿಶ್ರ ಮಾಡಿ ಅದನ್ನು ಗುದದ್ವಾರದ ಸುತ್ತಲೂ ಹಚ್ಚಿದರೆ ಊತ ಕಡಿಮೆ ಆಗುತ್ತದೆ.
* ಮುಟ್ಟಿದರೆ ಮುನಿ (ನಾಚಿಕೆ ಮುಳ್ಳು) ಗಿಡವನ್ನು ಒಣಗಿಸಿ ಪುಡಿ ಮಾಡಿ ಒಂದು ಲೋಟ ನೀರಿಗೆ ಒಂದು ಚಮಚ ಪುಡಿ ಬೆರೆಸಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಮೂಲವ್ಯಾಧಿ ಸಮಸ್ಯೆ ನಿವಾರಣೆಗೆ ಒಳ್ಳೆಯದು.
* ತ್ರಿಫಲಾ ಕಷಾಯ ಮೂಲವ್ಯಾಧಿ ಗುಣಪಡಿಸುವಲ್ಲಿ ತುಂಬಾ ಸಹಕಾರಿಯಾಗಿದೆ.
* ಎಂಟು ಲೋಟ ನೀರು ದಿನಕ್ಕೆ ಕುಡಿಯುವುದು ಕಡ್ಡಾಯ. ನೀರು ಕಡಿಮೆ ಕುಡಿಯುವವರಿಗೇ ಮಲಬದ್ಧತೆ ಆಗುತ್ತದೆ.
* ಬಿಲ್ವಪತ್ರದ ರಸವನ್ನು ನಿತ್ಯ ಸೇವಿಸುವುದು ಕೂಡ ಮೂಲವ್ಯಾಧಿಗೆ ಪರಿಣಾಮಕಾರಿಯಾದ ಔಷಧಿಯಾಗಿದೆ.
ಲೇಪನ – ಲೋಳೆಸರದ ತಿರುಳಿಗೆ ಹರಳೆಣ್ಣೆ ಬೆರೆಸಿ ರಾತ್ರಿ ಹೊತ್ತು ಮತ್ತು ಬೆಳಿಗ್ಗೆ ಮಲವಿಸರ್ಜನೆಯ ಮುಂಚೆ ಮತ್ತು ನಂತರದ ಸಮಯದಲ್ಲಿ ಲೇಪಿಸಬೇಕು. ತ್ರಿಫಲಾ ಕಷಾಯದಿಂದ ತೊಳೆದುಕೊಳ್ಳಬೇಕು.
ಕ್ಷಾರಸೂತ್ರ – ಔಷಧೀಯ ದ್ರವ್ಯದಲ್ಲಿ ದಾರಗಳನ್ನು ಅದ್ದಿ ತೆಗೆದು ಒಣಗಿಸಿರುತ್ತಾರೆ. ಅದನ್ನು ಕಟ್ಟಿ ನಂತರ ಕತ್ತರಿಸಿ ತೆಗೆಯುತ್ತಾರೆ. ಪರಿಣಿತ ತಜ್ಞ ವೈದ್ಯರ ಬಳಿ ಈ ಚಿಕಿತ್ಸೆ ತೆಗೆದುಕೊಳ್ಳಬೇಕು. ಔಷಧಿ ಚಿಕಿತ್ಸೆಯಿಂದ ಕಡಿಮೆಯಾಗದಿದ್ದಲ್ಲಿ ಕ್ಷಾರಸೂತ್ರ ಚಿಕಿತ್ಸೆ ಉತ್ತಮವಾದುದು.
ಕ್ಷಾರಸೂತ್ರ – ಔಷಧೀಯ ದ್ರವ್ಯದಲ್ಲಿ ದಾರಗಳನ್ನು ಅದ್ದಿ ತೆಗೆದು ಒಣಗಿಸಿರುತ್ತಾರೆ. ಅದನ್ನು ಕಟ್ಟಿ ನಂತರ ಕತ್ತರಿಸಿ ತೆಗೆಯುತ್ತಾರೆ. ಪರಿಣಿತ ತಜ್ಞ ವೈದ್ಯರ ಬಳಿ ಈ ಚಿಕಿತ್ಸೆ ತೆಗೆದುಕೊಳ್ಳಬೇಕು. ಔಷಧಿ ಚಿಕಿತ್ಸೆಯಿಂದ ಕಡಿಮೆಯಾಗದಿದ್ದಲ್ಲಿ ಕ್ಷಾರಸೂತ್ರ ಚಿಕಿತ್ಸೆ ಉತ್ತಮವಾದುದು.
ಯಾವ ಬಗೆಯ ಆಹಾರ ಒಳ್ಳೆಯದು ?
ಪಥ್ಯ – ಹಳೆಯ ಅಕ್ಕಿಯ ಅನ್ನ, ಹೆಸರು ಬೇಳೆ, ತೊಗರಿಬೇಳೆ ಕಟ್ಟು, ಮಜ್ಜಿಗೆ, ಹಾಲು, ತುಪ್ಪ, ಬೆಣ್ಣೆ ಸೇವಿಸಬಹುದು. ಮೂಲಂಗಿ, ಪಡವಲಕಾಯಿ, ಬಸಳೆ, ಹೊನಗೊನ್ನೆ ಸೊಪ್ಪು, ಜೀರಿಗೆ, ಹಿಂಗು, ಬಾಳೆಹಣ್ಣು ಸೇವನೆ ಒಳ್ಳೆಯದು. ಬಾಳೆಹಣ್ಣನ್ನು ಬೆಲ್ಲ ಮತ್ತು ಜೇನುತುಪ್ಪದೊಂದಿಗೆ ಬೆರೆಸಿ ತಿನ್ನಬೇಕು. ಬಾಳೆಯ ಹೂವನ್ನು ಅರೆದು ರಸ ತೆಗೆದು ಮಜ್ಜಿಗೆ ಬೆರೆಸಿ ಕುಡಿಯಬೇಕು. ಬಾಳೆದಿಂಡನ್ನು ರಸ ತೆಗೆದು ಕುಡಿಯಬೇಕು.
ಪಥ್ಯ – ಹಳೆಯ ಅಕ್ಕಿಯ ಅನ್ನ, ಹೆಸರು ಬೇಳೆ, ತೊಗರಿಬೇಳೆ ಕಟ್ಟು, ಮಜ್ಜಿಗೆ, ಹಾಲು, ತುಪ್ಪ, ಬೆಣ್ಣೆ ಸೇವಿಸಬಹುದು. ಮೂಲಂಗಿ, ಪಡವಲಕಾಯಿ, ಬಸಳೆ, ಹೊನಗೊನ್ನೆ ಸೊಪ್ಪು, ಜೀರಿಗೆ, ಹಿಂಗು, ಬಾಳೆಹಣ್ಣು ಸೇವನೆ ಒಳ್ಳೆಯದು. ಬಾಳೆಹಣ್ಣನ್ನು ಬೆಲ್ಲ ಮತ್ತು ಜೇನುತುಪ್ಪದೊಂದಿಗೆ ಬೆರೆಸಿ ತಿನ್ನಬೇಕು. ಬಾಳೆಯ ಹೂವನ್ನು ಅರೆದು ರಸ ತೆಗೆದು ಮಜ್ಜಿಗೆ ಬೆರೆಸಿ ಕುಡಿಯಬೇಕು. ಬಾಳೆದಿಂಡನ್ನು ರಸ ತೆಗೆದು ಕುಡಿಯಬೇಕು.
ನೆಲ್ಲಿಕಾಯಿ ಸಂಡಿಗೆ – ನೆಲ್ಲಿಕಾಯಿ ಸಿಗುವ ಕಾಲದಲ್ಲಿ ಸಂಗ್ರಹಿಸಿಟ್ಟು ಕೊಳ್ಳಬೇಕು. ನೆಲ್ಲಿಕಾಯಿಗಳನ್ನು ಕುಟ್ಟಿ ಅದರ ಬೀಜ ತೆಗೆಯಬೇಕು. ಇದನ್ನು ನೆನೆಸಿದ ಉದ್ದಿನಬೇಳೆಯೊಂದಿಗೆ ತರಿತರಿಯಾಗಿ ರುಬ್ಬಿ ಉಪ್ಪು, ಖಾರ, ಶುಂಠಿ ಬೆರೆಸಿ ಬಟ್ಟೆಯ ಮೇಲೆ ಸಂಡಿಗೆ ಹಾಕಬೇಕು. ಪ್ರತಿದಿನ ಇದನ್ನು ಊಟದೊಂದಿಗೆ ಎಣ್ಣೆಯಲ್ಲಿ ಕರಿಯದೇ ಒಣಸಂಡಿಗೆಯನ್ನೇ ಸೇವಿಸಬೇಕು. ಊಟದಲ್ಲಿ ನಂಚಿಕೊಂಡು ತಿಂದರೆ ಚೆನ್ನಾಗಿರುತ್ತದೆ.
ಇದನ್ನು ಪ್ರತಿದಿನ ತಿನ್ನುವುದರಿಂದ ಮಲವಿಸರ್ಜನೆ ಸಲೀಸಾಗಿ ಆಗುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ರಕ್ತಸ್ರಾವ ನಿಂತು ಮೂಲವ್ಯಾಧಿಯ ತೊಂದರೆಯೂ ಕಡಿಮೆಯಾಗುತ್ತದೆ. ಉಷ್ಣತೆ ತಗ್ಗುತ್ತದೆ. ಹೊಟ್ಟೆಯಲ್ಲಿ ಉರಿ, ಹೊಟ್ಟೆಯುಬ್ಬರ ಕಡಿಮೆಯಾಗುತ್ತದೆ.
ಇದನ್ನು ಪ್ರತಿದಿನ ತಿನ್ನುವುದರಿಂದ ಮಲವಿಸರ್ಜನೆ ಸಲೀಸಾಗಿ ಆಗುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ರಕ್ತಸ್ರಾವ ನಿಂತು ಮೂಲವ್ಯಾಧಿಯ ತೊಂದರೆಯೂ ಕಡಿಮೆಯಾಗುತ್ತದೆ. ಉಷ್ಣತೆ ತಗ್ಗುತ್ತದೆ. ಹೊಟ್ಟೆಯಲ್ಲಿ ಉರಿ, ಹೊಟ್ಟೆಯುಬ್ಬರ ಕಡಿಮೆಯಾಗುತ್ತದೆ.
ಕರಿಬೇವಿನ ಚಟ್ನಿಪುಡಿ – 500 ಗ್ರಾಂ ಕರಿಬೇವು, 250 ಗ್ರಾಂ ಹುರಿಗಡಲೆ, 10 ಒಣ ಮೆಣಸಿನಕಾಯಿ, ಚಿಟಿಕೆ ಹಿಂಗು.
ನೆರಳಿನಲ್ಲಿ ಒಣಗಿಸಿದ ಕರಿಬೇವನ್ನು, ಸ್ವಲ್ಪ ಎಣ್ಣೆಯಲ್ಲಿ ಮೆಣಸಿನಕಾಯಿ ಮತ್ತು ಹಿಂಗಿನೊಂದಿಗೆ ಹುರಿದು ಹುರಿಗಡಲೆಯೊಂದಿಗೆ ಸೇರಿಸಿ ಪುಡಿ ಮಾಡಿ ಇಟ್ಟುಕೊಂಡು ಅನ್ನ, ಚಪಾತಿ, ರೊಟ್ಟಿ, ದೋಸೆ ಎಲ್ಲದಕ್ಕೂ ಬಳಸಬಹುದು.
ನೆರಳಿನಲ್ಲಿ ಒಣಗಿಸಿದ ಕರಿಬೇವನ್ನು, ಸ್ವಲ್ಪ ಎಣ್ಣೆಯಲ್ಲಿ ಮೆಣಸಿನಕಾಯಿ ಮತ್ತು ಹಿಂಗಿನೊಂದಿಗೆ ಹುರಿದು ಹುರಿಗಡಲೆಯೊಂದಿಗೆ ಸೇರಿಸಿ ಪುಡಿ ಮಾಡಿ ಇಟ್ಟುಕೊಂಡು ಅನ್ನ, ಚಪಾತಿ, ರೊಟ್ಟಿ, ದೋಸೆ ಎಲ್ಲದಕ್ಕೂ ಬಳಸಬಹುದು.
ಕರಿಬೇವಿನ ಚಿತ್ರಾನ್ನ – ಅಕ್ಕಿ 2 ಕ್, ಕರಿಬೇವು 20 ಎಲೆ, ಒಂದು ಚಮಚೆ ಕಾಳು ಮೆಣಸು, ಜೀರಿಗೆ ಒಂದು ಚಮಚೆ, ಒಣಕೊಬ್ಬರಿ ತುರಿ ಒಂದು ಹಿಡಿ, ತುಪ್ಪ 5 ಚಮಚೆ, ಉಪ್ಪು ರುಚಿಕೆ ತಕ್ಕಷ್ಟು.
ಉದುರಾಗಿ ಅನ್ನ ತಯಾರಿಸಿಟ್ಟುಕೊಳ್ಳಬೇಕು. ಕರಿಬೇವನ್ನು ತೊಳೆದು ಸ್ವಚ್ಛಗೊಳಿಸಿಕೊಳ್ಳಬೇಕು. ಜೀರಿಗೆ, ಮೆಣಸನ್ನು ಹುರಿದು ತರಿತರಿಯಾಗಿ ಪುಡಿ ಮಾಡಿಟ್ಟುಕೊಳ್ಳಬೇಕು. ಕರಿಬೇವನ್ನು ಬಾಣಲೆಯಲ್ಲಿ ಬಾಡಿಸಬೇಕು. ಕೈಯಿಂದ ಪುಡಿ ಮಾಡಿಕೊಳ್ಳಬೇಕು. ತುಪ್ಪದ ಒಗ್ಗರಣೆ ಹಾಕಿ ಜೀರಿಗೆ, ಮೆಣಸಿನ ತರಿ, ಕರಿಬೇವಿನ ಪುಡಿ ಹಾಕಿ ಸೌಟಿನಿಂದ ಕೈಯಾಡಿಸಬೇಕು. ನಂತರ ಇದಕ್ಕೆ ಅನ್ನ ಹಾಕಿ ಕೊಬ್ಬರಿ ತುರಿ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಹದವಾಗಿ ಕಲೆಸಿ ಮುಚ್ಚಿಡಬೇಕು. ಮೂಲವ್ಯಾಧಿಯವರಿಗೆ ಮಾತ್ರವಲ್ಲ ಅಜೀರ್ಣ ಮತ್ತು ಜ್ವರ ಬಿಟ್ಟ ನಂತರವೂ ಇದು ಉತ್ತಮ ಆಹಾರ.
ಉದುರಾಗಿ ಅನ್ನ ತಯಾರಿಸಿಟ್ಟುಕೊಳ್ಳಬೇಕು. ಕರಿಬೇವನ್ನು ತೊಳೆದು ಸ್ವಚ್ಛಗೊಳಿಸಿಕೊಳ್ಳಬೇಕು. ಜೀರಿಗೆ, ಮೆಣಸನ್ನು ಹುರಿದು ತರಿತರಿಯಾಗಿ ಪುಡಿ ಮಾಡಿಟ್ಟುಕೊಳ್ಳಬೇಕು. ಕರಿಬೇವನ್ನು ಬಾಣಲೆಯಲ್ಲಿ ಬಾಡಿಸಬೇಕು. ಕೈಯಿಂದ ಪುಡಿ ಮಾಡಿಕೊಳ್ಳಬೇಕು. ತುಪ್ಪದ ಒಗ್ಗರಣೆ ಹಾಕಿ ಜೀರಿಗೆ, ಮೆಣಸಿನ ತರಿ, ಕರಿಬೇವಿನ ಪುಡಿ ಹಾಕಿ ಸೌಟಿನಿಂದ ಕೈಯಾಡಿಸಬೇಕು. ನಂತರ ಇದಕ್ಕೆ ಅನ್ನ ಹಾಕಿ ಕೊಬ್ಬರಿ ತುರಿ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಹದವಾಗಿ ಕಲೆಸಿ ಮುಚ್ಚಿಡಬೇಕು. ಮೂಲವ್ಯಾಧಿಯವರಿಗೆ ಮಾತ್ರವಲ್ಲ ಅಜೀರ್ಣ ಮತ್ತು ಜ್ವರ ಬಿಟ್ಟ ನಂತರವೂ ಇದು ಉತ್ತಮ ಆಹಾರ.
ಕೊತ್ತಂಬರಿ ಚಟ್ನಿ – ಕೊತ್ತಂಬರಿ ಸೊಪ್ಪು 2 ಕಟ್ಟು, ಒಣ ಮೆಣಸಿನಕಾಯಿ-2, ಕಡಲೆಬೇಳೆ 2 ಚಮಚೆ, ಉದ್ದಿನಬೇಳೆ 2 ಚಮಚೆ, ಜೀರಿಗೆ 2 ಚಮಚೆ, ಹುಣಸೆ ರಸ ಸ್ವಲ್ಪ, ಒಣ ಕೊಬ್ಬರಿ ತುರಿ ಸ್ವಲ್ಪ, ರುಚಿಗೆ ತಕ್ಕಷ್ಟು ಉಪ್ಪು, ಬೇಕೆನಿಸಿದಲ್ಲಿ ಬೆಲ್ಲ, ಎಣ್ಣೆ ಸ್ವಲ್ಪ.
ಕೊತ್ತಂಬರಿ ಸೊಪ್ಪನ್ನು ಸ್ವಚ್ಛವಾಗಿ ತೊಳೆದು ಬಿಡಿಸಿಟ್ಟುಕೊಳ್ಳಬೇಕು. ನಂತರ ಬಾಣಲಿಯಲ್ಲಿ ಎಣ್ಣೆ ಹಾಕಿ ಕೊತ್ತಂಬರಿ ಸೊಪ್ಪು ಹಾಕಿ ಹುರಿದುಕೊಳ್ಳಬೇಕು. ಕಡಲೆಬೇಳೆ, ಉದ್ದಿನಬೇಳೆ, ಜೀರಿಗೆ, ಒಣ ಮೆಣಸಿನಕಾಯಿ ಒಗ್ಗರಣೆಗೆ ಹಾಕಿಕೊಳ್ಳಬೇಕು. ಅದಕ್ಕೆ ಹುಣಸೆ ರಸ, ಉಪ್ಪು, ಬೆಲ್ಲ ಸೇರಿಸಿ ಮಿಕ್ಸಿಗೆ ಹಾಕಿ ಚಟ್ನಿ ತಯಾರಿಸಿಕೊಳ್ಳಬೇಕು. ಅದಕ್ಕೆ ನೀರು ಹಾಕದೇ ರುಬ್ಬಿಕೊಳ್ಳಬೇಕು. ಈ ಚಟ್ನಿಯನ್ನು ಒಂದು ವಾರ ಕಾಲ ಇಟ್ಟರೂ ಹಾಳಾಗುವುದಿಲ್ಲ. ಅನ್ನ, ರೊಟ್ಟಿ, ಚಪಾತಿ ಜೊತೆಗೆ ತಿನ್ನಲು ರುಚಿ.
ಕೊತ್ತಂಬರಿ ಸೊಪ್ಪನ್ನು ಸ್ವಚ್ಛವಾಗಿ ತೊಳೆದು ಬಿಡಿಸಿಟ್ಟುಕೊಳ್ಳಬೇಕು. ನಂತರ ಬಾಣಲಿಯಲ್ಲಿ ಎಣ್ಣೆ ಹಾಕಿ ಕೊತ್ತಂಬರಿ ಸೊಪ್ಪು ಹಾಕಿ ಹುರಿದುಕೊಳ್ಳಬೇಕು. ಕಡಲೆಬೇಳೆ, ಉದ್ದಿನಬೇಳೆ, ಜೀರಿಗೆ, ಒಣ ಮೆಣಸಿನಕಾಯಿ ಒಗ್ಗರಣೆಗೆ ಹಾಕಿಕೊಳ್ಳಬೇಕು. ಅದಕ್ಕೆ ಹುಣಸೆ ರಸ, ಉಪ್ಪು, ಬೆಲ್ಲ ಸೇರಿಸಿ ಮಿಕ್ಸಿಗೆ ಹಾಕಿ ಚಟ್ನಿ ತಯಾರಿಸಿಕೊಳ್ಳಬೇಕು. ಅದಕ್ಕೆ ನೀರು ಹಾಕದೇ ರುಬ್ಬಿಕೊಳ್ಳಬೇಕು. ಈ ಚಟ್ನಿಯನ್ನು ಒಂದು ವಾರ ಕಾಲ ಇಟ್ಟರೂ ಹಾಳಾಗುವುದಿಲ್ಲ. ಅನ್ನ, ರೊಟ್ಟಿ, ಚಪಾತಿ ಜೊತೆಗೆ ತಿನ್ನಲು ರುಚಿ.
ಗುಲ್ಕಂದ್ – ಗುಲಾಬಿ ದಳಗಳು 1 ಭಾಗ, ಜೇನುತುಪ್ಪ ಅರ್ಧ ಭಾಗ, ಕಲ್ಲುಸಕ್ಕರೆ ಪುಡಿ ಅರ್ಧ ಭಾಗ ಅಥವಾ ಜೇನುತುಪ್ಪ, ಗುಲಾಬಿ ಸಮಭಾಗ ತೆಗೆದುಕೊಳ್ಳಬೇಕು. ಉತ್ತಮ ಗುಣಮಟ್ಟದ ಗುಲಾಬಿದಳಗಳನ್ನು ಆಯ್ದು ದಳಗಳನ್ನು ಬಿಡಿಸಿಟ್ಟುಕೊಳ್ಳಬೇಕು. ನಂತರ ನೀರಿನಲ್ಲಿ ಸ್ವಚ್ಛವಾಗಿ ತೊಳೆದುಕೊಳ್ಳಬೇಕು. ತೊಳೆದ ನಂತರ ಆರಲು ಬಿಡಬೇಕು. ತೇವಾಂಶ ಇಲ್ಲದಂತೆ ಒಣಗಿರಬೇಕು. ಒಂದು ಪಿಂಗಾಣಿ ಜಾಡಿಯಲ್ಲಿ ಕಲ್ಲು ಸಕ್ಕರೆ ಪುಡಿ ಉದುರಿಸಿ ಗುಲಾಬಿ ಹರಡಬೇಕು. ನಂತರ ಜೇನುತುಪ್ಪ ಹಾಕಬೇಕು. ಮತ್ತೆ ಕಲ್ಲು ಸಕ್ಕರೆ ಪುಡಿ, ಗುಲಾಬಿ, ಜೇನುತುಪ್ಪ ಹಾಕಬೇಕು. ಇದೇ ರೀತಿ ಹತ್ತು ಪದರ ಹರಡಬೇಕು. ನಂತರ ಜಾಡಿಯನ್ನು ಸ್ವಚ್ಛವಾದ ಬಿಳಿಯ ಬಟ್ಟೆಯಲ್ಲಿ ಮುಚ್ಚಬೇಕು. ತೇವಾಂಶ ಒಳಹೋಗದಂತೆ ಗಟ್ಟಿಯಾಗಿ ಮುಚ್ಚಬೇಕು. ನಂತರ ಈ ಜಾಡಿಯನ್ನು ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಹಗಲು ಹೊತ್ತು ಬಿಸಿಲಿನಲ್ಲಿ ಇಟ್ಟು ಸೂರ್ಯಾಸ್ತದ ನಂತರ ಮನೆಯೊಳಗಡೆ ತೆಗೆದಿಡಬೇಕು. ಇದೇ ರೀತಿ 3 ವಾರ ಅಂದರೆ 21 ದಿನಗಳು ಮಾಡಬೇಕು. ನಂತರ ಮೇಲಿನ ಬಟ್ಟೆ ತೆಗೆಯಬೇಕು. ರುಚಿಕರವಾದ ಗುಲ್ಕಂದ್ ಸಿದ್ಧವಾಗುತ್ತದೆ. ಗುಲಾಬಿದಳಗಳು ಜೇನು ಮತ್ತು ಕಲ್ಲು ಸಕ್ಕರೆಯಲ್ಲಿ ಬೆರೆತು, ಕಲೆತು ಮೃದುವಾಗಿರುತ್ತವೆ. ಏಲಕ್ಕಿ ಪುಡಿ ಬೆರೆಸಿದಲ್ಲಿ ಘಮ ಘಮ ಪರಿಮಳ ಬರುತ್ತದೆ. ಮೂಲವ್ಯಾಧಿಯಲ್ಲಿ ರಕ್ತ ಬೀಳುತ್ತಿದ್ದಲ್ಲಿ ಇದು ಅತ್ಯುತ್ತಮ ಆಹಾರ ಮತ್ತು ಔಷಧಿಯಾಗಿ ಕೆಲಸ ಮಾಡುತ್ತವೆ. ಒಂದು ಚಮಚೆ ಗುಲ್ಕಂ್ ತಿಂದು ಹಾಲು ಕುಡಿಯಬೇಕು. ಬಾಳೆಹಣ್ಣಿನೊಂದಿಗೆ ಬೆರೆಸಿ ತಿನ್ನಬಹುದು.
ಪಪ್ಪಾಯ ಹಣ್ಣಿನ ಸಲಾಡ್- ಪಪ್ಪಾಯ ಹಣ್ಣನ್ನು ಸಣ್ಣಗೆ ಹೆಚ್ಚಿ ಅದಕ್ಕೆ ಹಾಲು, ಜೇನು ಬೆರೆಸಿ ತಿಂದಲ್ಲಿ ಒಳ್ಳೆಯದು. ಪಪ್ಪಾಯದೊಂದಿಗೆ ಬಾಳೆಹಣ್ಣು, ಕರಬೂಜ ಹಣ್ಣುಗಳನ್ನು ಬೆರೆಸಿಕೊಳ್ಳಬಹುದು.
ಪಪ್ಪಾಯ ಹಣ್ಣಿನ ಸಲಾಡ್- ಪಪ್ಪಾಯ ಹಣ್ಣನ್ನು ಸಣ್ಣಗೆ ಹೆಚ್ಚಿ ಅದಕ್ಕೆ ಹಾಲು, ಜೇನು ಬೆರೆಸಿ ತಿಂದಲ್ಲಿ ಒಳ್ಳೆಯದು. ಪಪ್ಪಾಯದೊಂದಿಗೆ ಬಾಳೆಹಣ್ಣು, ಕರಬೂಜ ಹಣ್ಣುಗಳನ್ನು ಬೆರೆಸಿಕೊಳ್ಳಬಹುದು.
ಪುಂಡಿ ಸೊಪ್ಪಿನ ಚಟ್ನಿ – 2 ರಿಂದ 3 ಕಟ್ಟು ಪುಂಡಿ ಸೊಪ್ಪು, ಒಣಮೆಣಸಿನಕಾಯಿ 6, ಉದ್ದಿನ ಬೇಳೆ 4 ಚಮಚೆ, ಮೆಂತ್ಯ 2 ಚಮಚೆ, ಜೀರಿಗೆ ಒಂದು ಚಮಚೆ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ಸ್ವಲ್ಪ.
ಪುಂಡಿ ಸೊಪ್ಪನ್ನು ಚೆನ್ನಾಗಿ ತೊಳೆದು ನೀರು ಚೆನ್ನಾಗಿ ಒಣಗಿಸಿದ ಮೇಲೆ ಎಣ್ಣೆ ಹಾಕಿ ಹುರಿಯಬೇಕು. ನಂತರ ಕಾಯಿ, ಉದ್ದಿನಬೇಳೆ ಪುಡಿ, ಮೆಂತ್ಯ, ಜೀರಿಗೆ, ಉಪ್ಪು ಎಲ್ಲವನ್ನು ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಬೇಕು. ಇದನ್ನು ಕೆಲದಿನಗಳ ಕಾಲ ತೆಗೆದಿಟ್ಟಲ್ಲಿ ಕೆಡುವುದಿಲ್ಲ.
ಪುಂಡಿ ಸೊಪ್ಪನ್ನು ಚೆನ್ನಾಗಿ ತೊಳೆದು ನೀರು ಚೆನ್ನಾಗಿ ಒಣಗಿಸಿದ ಮೇಲೆ ಎಣ್ಣೆ ಹಾಕಿ ಹುರಿಯಬೇಕು. ನಂತರ ಕಾಯಿ, ಉದ್ದಿನಬೇಳೆ ಪುಡಿ, ಮೆಂತ್ಯ, ಜೀರಿಗೆ, ಉಪ್ಪು ಎಲ್ಲವನ್ನು ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಬೇಕು. ಇದನ್ನು ಕೆಲದಿನಗಳ ಕಾಲ ತೆಗೆದಿಟ್ಟಲ್ಲಿ ಕೆಡುವುದಿಲ್ಲ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ