ಮಂಗಳವಾರ, ನವೆಂಬರ್ 28, 2017

ನಿಮ್ಮ ಕುಂಕುಮದಲ್ಲಿ ಕೆಮಿಕಲ್ ಇದೆಯೇ?

ನಿಮ್ಮ ಕುಂಕುಮದಲ್ಲಿ ಕೆಮಿಕಲ್ ಇದೆಯೇ?  ಅಲರ್ಜಿ ಮುಕ್ತ ಕುಂಕುಮ ಬೇಕೇ? ಮನೆಯಲ್ಲೇ ತಯಾರುಮಾಡಿಕೊಳ್ಳಿ.
--------@------------
ತುಂಬಾ ಜನ ಅಕ್ಕ - ತಂಗಿಯರು ಕುಂಕುಮ ಮಾಡುವ ರೀತಿ ಹೇಗೆಂದು ಕೇಳುತ್ತಿದ್ದರು. ಹಾಗಾಗಿ ನನಗೆ ತಿಳಿದ ಕ್ರಮವನ್ನು ಅಪೇಕ್ಷಿತರಿಗಾಗಿ ಬರೆಯುತ್ತಾ ಇದ್ದೇನೆ..
ಬೇಕಾಗುವ ಸಾಮಗ್ರಿಗಳು:
ಒಳ್ಳೆ ಜಾತಿಯ ಅರಿಶಿನ ಕೋಡು ಒಂದು ಕಿಲೊ
ಬಿಳಿಗಾರ * 150ಗ್ರಾಂ
ಸ್ಪಟಿಕ* ಹತ್ತುಗ್ರಾಂ
ನಿಂಬೆಹುಳಿಯ ರಸ 750 ಮಿಲಿಲೀಟರು {ಮುಕ್ಕಾಲು ಲೀ, ಬೀಜ ತೆಗೆದು ಸೋಸಿದ್ದು}
ಊರ ದನದ ತುಪ್ಪ100ಗ್ರಾಂ
ಒಂದು ಪ್ಲಾಸ್ಟಿಕ್ ಶೀಟ್ { ಚಾಪೆಯೂ ಆಗಬಹುದು}
ಇಷ್ಟು ಸಾಮಾನುಗಳನ್ನು ತುಂಬಬಹುದಾದ ಒಂದು ಪಾತ್ರೆ. {ಪಿಂಗಾಣಿಯದ್ದೋ, ಮಣ್ಣಿನದ್ದೋ ಆದರೆ ಒಳ್ಳೆದು.ಅದು ಸಿಕ್ಕದೆ ಇದ್ದರೆ ಸ್ಟೀಲ್ ಪಾತ್ರೆ. ಅಗಲ ಬಾಯಿದಾದರೆ ಪಾಕವನ್ನು ಗೋಟಾಯಿಸಲು ಸುಲಭ.}
ಕುಂಕುಮ ತಯಾರಿಕೆಯ ವಿಧಾನ :
ಶುದ್ಧವಾದ ಅರಿಶಿನ ಕೋಡನ್ನು ತೊಳೆದು ಸಣ್ಣ-ಸಣ್ಣ ತುಂಡುಮಾಡಿಗೊಳ್ಳಬೇಕು. ಮತ್ತೆ ಸ್ಪಟಿಕವನ್ನೂ ಬಿಳಿಗಾರವನ್ನೂ ನುಣ್ಣಗೆ ಪುಡಿ ಮಾಡಿಕೊಂಡು, ನಿಂಬೆಹುಳಿಯ ರಸದಲ್ಲಿ ಸರಿಯಾಗಿ ಕಲಸಿ ಅದಕ್ಕೆ ಅರಿಶಿನ ಹೋಳುಗಳನ್ನ ಹಾಕಿ ಸರಿಯಾಗಿ ಮಿಶ್ರಮಾಡಬೇಕು.
ಈ ಮಿಶ್ರಣವನ್ನು, ಪಾತ್ರೆಯಲ್ಲಿ ಎರಡು ದಿನ {ಅರಿಶಿನ ತುಂಡು ನಿಂಬೆಹುಳಿ ರಸ ಹೀರುವುದಕ್ಕೆ ಇಡಬೇಕು. ದಿನಕ್ಕೆ ಏಳೆಂಟು ಸರ್ತಿ ಅದನ್ನು ಸೌಟುಹಾಕಿ ಗೋಟಾಯಿಸಬೇಕು.)
ಎರಡು ದಿನ ಬಿಟ್ಟು ಪ್ಲಾಸ್ಟಿಕ್  ಶೀಟಿನಲ್ಲಿ ಹರವಿ ಮನೆ ಒಳಗೆ ಒಣಗಿಸಬೇಕು. ಇದು ಸಾದಾರಣ ಹದಿನೈದು ದಿನ ಒಣಗಿದ ಮೇಲೆ ನುಣ್ಣಗೆ ಪುಡಿ ಮಾಡಿ, ಜರಡಿಯಾಡಿಸಬೇಕು. ಕೊನೆಗೆ ತುಪ್ಪ ಹಾಕಿ ಚೆನ್ನಾಗಿ ಕೈಯಲ್ಲಿ ತಿಕ್ಕಿ,ತಿಕ್ಕಿ ಹದ ಮಾಡಬೇಕು. ಇದೀಗ ಶುದ್ಧ ಕುಂಕುಮ ರೆಡಿ.
ಇದು ಸರಿಯಾದ ಕುಂಕುಮ. ಒಳ್ಳೆ ಬಣ್ಣ ಹೊಂದಿದ್ದು, ತುಂಬಾ ಸಮಯಕ್ಕೆ ಬಾಳಿಕೆ ಬರುತ್ತದೆ. ಮಾತ್ರ ಅಲ್ಲ, ಮನುಷ್ಯನ ಭ್ರೂಮಧ್ಯಕ್ಕೆ ಹಾಕಿದರೆ ಆರೋಗ್ಯದಾಯಕ. ಶೀತ ಆದ ಪುಟ್ಟ ಮಕ್ಕಳಿಗೂ ನೆತ್ತಿಗೆ ಹಾಕಿ ತಿಕ್ಕಿದರೆ ಒಂದೇ ದಿನದಲ್ಲಿ ಮೂಗಿನಲ್ಲಿ  ಹರಿವ ಸಿಂಬಳವೂ ನಿಲ್ಲುತ್ತದೆ.
* ಸ್ಪಟಿಕ ಹಾಗೂ ಬಿಳಿಗಾರ (ಬಿಳಿಯಾಗಿ ಇಂಗಿನ ಗಟ್ಟಿಯಂತಿದೆ). ಇವುಗಳು ಆಯುರ್ವೇದ ಔಷಧಿ ಮಾರುವ ಅಂಗಡಿಯಲ್ಲಿ ಸಿಗುತ್ತದೆ. ಬಿಳಿಗಾರ (ಬೋರಾಕ್ಸ್) – ಪಟಿಕ (ಆಲಮ್) ಎಂದರೆ ದ್ವಿಲವಣಗಳ ಒಂದು ನಿರ್ದಿಷ್ಟ ಗುಂಪು.
– ವಿಜಯಾ ಸುಬ್ರಹ್ಮಣ್ಯ , ಕುಂಬಳೆ
ಬಾದಾಮಿ
ಉತ್ತಮ ಸ್ನಾಕ್ಸ್ ಉದಾಹರಣೆಯೇ ಬಾದಾಮಿ.ಇದರಲ್ಲಿ ವಿಟಮಿನ್ ಇ, ನಾರು ಮತ್ತು ಪ್ರೊಟೀನ್ ಸೇರಿದಂತೆ ಒಟ್ಟು 15 ಪೌಷ್ಟಿಕಾಂಶಗಳು ಇದೆ. ಆದ್ದರಿಂದ ಪ್ರತಿದಿನ 30 ಗ್ರಾಂ ಬಾದಾಮಿ ತಿಂದರೆ ಕೆಟ್ಟ ಕೊಲೆಸ್ಟ್ರಲ್,ಅತಿ ತೂಕ ಮತ್ತು ಅಧಿಕ ರಕ್ತದೊತ್ತಡ ನಿವಾರಣೆಯಾಗುತ್ತದೆ. ಹಾಗಂತ ರುಚಿಯಲ್ಲಿ ಸಪ್ಪೆಯಾಗಿರುವ ಬಾದಾಮಿಯನ್ನು ಹಾಗೆ ತಿನ್ನಲು ಕೆಲವರಿಗೆ ಇಷ್ಟವಾಗುವುದಿಲ್ಲ.ಆದರೆ ಇದನ್ನು ಆಹಾರದಲ್ಲಿ ಬೇರೆ ಬೇರೆ ರೂಪದಲ್ಲಿ ಸೇವನೆ ಮಾಡಬಹುದು.ಅದು ಹೇಗೆಂದರೆ.
♦ ಮೊಳಕೆಯ ಸಲಾಡ್ ಅಥವಾ ತರಕಾರಿ ಸಲಾಡ್ ಗೆ ಸ್ವಲ್ಪ ಬಾದಾಮಿ ಹಾಕಿ ಸೇವಿಸಿ.
♦ ಮೊಸರಿಗೆ ಬಾದಾಮಿಯ ಪೇಸ್ಟ್ ಹಾಕಿ ಸೇವಿಸಿ.
♦ ಅವಲಕ್ಕಿ ಅಥವಾ ಉಪ್ಪಿಟ್ಟಿನ ಮೇಲೆ ಬಾದಾಮಿಯ ತರಿಯನ್ನು ಉದುರಿಸಿ ತಿನ್ನಿ.
♦ ಪ್ರತಿ ಬಾರಿಯೂ ತೆಂಗಿನಕಾಯಿ ತಿನ್ನುವುದಕ್ಕಿಂತ ಆಗಾಗ ಬಾದಾಮಿ ಚಟ್ನಿ ಮಾಡಿ ಸೇವಿಸಿ.
♦ ರಾತ್ರಿ ಹಳದಿ ಹಾಕಿದ ಹಾಲಿಗಿಂತ ಬಾದಾಮಿ ಹಾಕಿದ ಹಾಲು ಕುಡಿಯಿರಿ.
♦ ಟೋಮೊಟೊ, ಮಶ್ರೂಮ್ ಅಥವಾ ಸ್ವೀಟ್ ಕಾರ್ನ್ ಸೂಪ್ ಗಿಂತ ಬಾದಾಮಿ ಸೂಪ್ ಮಾಡಿ ಕುಡಿಯಿರಿ.
ಸಂಗ್ರಹ ಮಾಹಿತಿ
ಟೋಮೊಟೊ ಫೇಸ್ ಪ್ಯಾಕ್ :
♦ ಗಂಧದ + ಮತ್ತು ಸಿಪ್ಪೆ ಮತ್ತು ಬೀಜ ರಹಿತ ಟೋಮೊಟೊ ತಿರುಳು ಚೆನ್ನಾಗಿ ಬೆರೆಸಿ ಮುಖಕ್ಕೆ ಹಚ್ಚಿ 15 ನಿಮಿಷ ಒಂಗಳು ಬಿಟ್ಟು ತಣ್ಣೀರಿನಲ್ಲಿ ಮುಖ ತೊಳೆಯಿರಿ. ವಾರಕ್ಕೆ 2-3 ಬಾರಿ ಇದನ್ನು ಪುನರಾವರ್ತಿಸಿ. ಟೋಮೊಟೊದಲ್ಲಿರುವ ಟ್ಯಾನಿನ್ ಗಾಢ ಮೇಲೆನಿನ್ ಕಣಾ ತಿಳಿಯಾಗಿಸುತ್ತದೆ. ಗಂಧ ಚರ್ಮ ಮತ್ತೆ ಸಹಜವರ್ಣ ಪಡೆಯಲು ಸಹಾಯಕ.
♦ ಕೆಲವೇ ದಿನಗಳಲ್ಲಿ ಚರ್ಮದ ಕಾಂತಿ ಹೆಚ್ಚುತ್ತದೆ.
♦ ಮೊಡವೆ ದೂರವಾಗಿಸಿ, ತುರಿಕೆ ಇಲ್ಲವಾಗಿಸುತ್ತದೆ.
♦ ಕೊಲ್ಯಾಜಿನ್ ಹೆಚ್ಚಿಸಿ ಮುಖ ನೆರಿಗೆ ಬೀಳದಂತೆ ತಡೆಯುತ್ತದೆ.
ಮಾಹಿತಿ: ಆರೋಗ್ಯ ಮಾಹಿತಿ
ಒಡೆದ ಹಿಮ್ಮಡಿ ನಿಮ್ಮನ್ನು ಕಾಡುತ್ತಿದೆಯಾ?
ಒಡೆದ ಹಿಮ್ಮಡಿ ನಿಮ್ಮನ್ನು ಕಾಡುತ್ತಿದೆಯಾ? ಸರಿಯಾಗಿ ಪೋಷಣೆ ಮಾಡದಿದ್ದರೆ ನಿಮ್ಮ ಕಾಲುಗಳೇ ನಿಮಗೆ ಶತ್ರುವಾಗಬಹುದು. ಅದರಲ್ಲೂ ಮಳೆಗಾಲದಲ್ಲಿ ಹಿಮ್ಮಡಿ ಒಡೆಯುವುದನ್ನು ನಿರ್ಲಕ್ಷಿಸಿದರೆ ಸಹಿಸಲಾರದ ನೋವು. ಒಡೆದ ಹಿಮ್ಮಡಿಯನ್ನು ಮೃದುಗೊಳಿಸುವುದು ಹೇಗೆ ಎಂಬ ಬಗ್ಗೆ ಕೆಲವು ಸಲಹೆಗಳು ಇಲ್ಲಿವೆ. ಒಡೆದ ಹಿಮ್ಮಡಿಗೆ ಸಲಹೆಗಳು: 1. ಪ್ಯೂಮಿಕ್ ಸ್ಟೋನ್: ಮೆಡಿಕಲ್ ಶಾಪ್ ಗಳಲ್ಲಿ ದೊರೆಯುವ ಪ್ಯೂಮಿಕ್ ಸ್ಟೋನ್ ನಿಂದ ಒಣಗಿದ ನಿಮ್ಮ ಹಿಮ್ಮಡಿಗಳನ್ನು ಸ್ನಾನ ಮಾಡುವಾಗ ಸ್ಕ್ರಬ್ ನಂತೆ ಮೃದುವಾಗಿ ಉಜ್ಜಿಕೊಂಡರೆ ನಿರ್ಜೀವ ಕಣಗಳು ತೊಲಗಿ ಪಾದಗಳು ನುಣುಪಾಗುತ್ತದೆ. 2. ಮಾಯಿಶ್ಚರೈಸರ್: ಚರ್ಮ ಒಣಗಲು ಬಿಡದೆ ಪಾದಕ್ಕೆ ಮಾಯಿಶ್ಚರೈಸರನ್ನು ಹಚ್ಚುತ್ತಿದ್ದರೆ ಚರ್ಮ ಮೃದುಗೊಳ್ಳುತ್ತದೆ. ಸಾಕ್ಸ್ ಹಾಕಿಕೊಳ್ಳುವ ಮುನ್ನ ಬಾಡಿ ಲೋಶನ್ ಅಥವಾ ಮಾಯಿಶ್ಚರೈಸರ್ ಲೇಪಿಸಿಕೊಂಡರೆ ಪಾದ ಕೋಮಲವಾಗಿರುತ್ತದೆ. ರಾತ್ರಿ ಹೊತ್ತು ಲೇಪಿಸಿಕೊಂಡು ಮಲಗಿದರೆ ಉತ್ತಮ. 3. ಉಪ್ಪು ನೀರು: ಉಗುರು ಬೆಚ್ಚಗಿನ ನೀರಿನಲ್ಲಿ ಉಪ್ಪು ಮತ್ತು ನಿಂಬೆ ರಸ ಬೆರೆಸಿ 20 ನಿಮಿಷ ಪಾದವನ್ನು ಅದರಲ್ಲಿ ಇಡಬೇಕು. ಉಪ್ಪು ಪಾದವನ್ನು ಮೃದುಗೊಳಿಸಿದರೆ, ನಿಂಬೆ ಕೊಳೆಯನ್ನು ತೊಲಗಿಸುತ್ತದೆ. ಪ್ಯೂಮಿಕ್ ಸ್ಟೋನ್ ನಿಂದ ಮೃದುವಾಗಿ ಉಜ್ಜಿದರೆ ಸ್ವಚ್ಛ ಪಾದ ನಿಮ್ಮದಾಗುತ್ತೆ. 4. ರೊಸ್ ವಾಟರ್: ಗ್ಲಿಸರಿನ್ ಜೊತೆ ರೋಸ್ ವಾಟರ್ ಸೇರಿಸಿ ಅದನ್ನು ಹತ್ತಿಯಿಂದ ಹಚ್ಚಿಕೊಳ್ಳಬೇಕು. ಸುಮಾರು 15 ದಿನ ಈ ನಿಯಮ ಪಾಲಿಸಿದರೆ ಒಡೆದ ಹಿಮ್ಮಡಿ ಬೇಗ ಗುಣಹೊಂದುತ್ತದೆ. 5. ಶೂ ಧರಿಸಿ: ನಿಮ್ಮ ಪಾದಗಳಲ್ಲಿ ತೇವಾಂಶವಿರುವಂತೆ ನೋಡಿಕೊಂಡು ಹಿಮ್ಮಡಿ ಒಡೆಯದಂತಿರಲು ಶೂ ಧರಿಸಿದರೆ ತುಂಬಾ ಉಪಯುಕ್ತ. 6. ನೀರು ಕುಡಿಯಿರಿ: ತುಂಬಾ ಚೆನ್ನಾಗಿ ನೀರು ಕುಡಿದರೆ ದೇಹದೊಂದಿಗೆ ಪಾದವನ್ನೂ ತಣ್ಣಗಿಡುತ್ತದೆ. ಇದು ಹಿಮ್ಮಡಿ ಒಡೆಯದಂತೆ ಒಳಗಿನಿಂದ ರಕ್ಷಣೆ ನೀಡುತ್ತದೆ. 7. ಬಾಳೆಯೊಂದಿಗೆ ಗ್ಲಿಸರಿನ್: ಚೆನ್ನಾಗಿ ಕಳಿತ ಬಾಳೆ ಹಣ್ಣಿಗೆ ಕೆಲವು ಹನಿ ಗ್ಲಿಸರಿನ್ ಬೆರೆಸಿ ಅದನ್ನು ಒಡೆದ ಪಾದಗಳಿಗೆ ಹಚ್ಚಿಕೊಂಡರೆ ಪಾದ ನುಣುಪಾಗಿ ಮಿರುಗುತ್ತದೆ. Topics: ಆರೋಗ್ಯ, ಕಾಲು
ಹಿಂದೆ ಕೇವಲ ವಯಸ್ಸಾದರವರಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಿಳಿಕೂದಲು ಇತ್ತೀಚೆಗೆ ಸಣ್ಣ ವಯಸ್ಸಿನ ಮಕ್ಕಳಲ್ಲಿ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.
ದೇಹದಲ್ಲಿ ಬಣ್ಣ ತಯಾರಿಸುವಂತಹ ಕೋಶಗಳು ಅಗತ್ಯವಿರುವಷ್ಟು ಪ್ರಮಾಣದ ಮೆಲನಿನ್ ಉತ್ಪಾದನೆಯನ್ನು ನಿಲ್ಲಿಸಿದಾಗ ಬಿಳಿ ಕೂದಲು ಬರುತ್ತದೆ. ಪ್ರತಿಯೊಂದು ಕೂದಲಿನ ಕೋಶಗಳ ವರ್ಣದ್ರವ್ಯ ಸಂಭಾವ್ಯತೆಯನ್ನು ನಿಮ್ಮ ಜೀನ್‌ಗಳು ನಿರ್ಧರಿಸುತ್ತದೆ. ಹೈಡ್ರೋಜನ್ ಪೆರಾಕ್ಸೈಡ್ ಕೂದಲು ಬಿಳಿಯಾಗಲು  ಪ್ರಮುಖ ಕಾರಣವಾಗಿದೆ. ನಿಮ್ಮ ಕೂದಲು ಹೈಡ್ರೋಜನ್ ಪೆರಾಕ್ಸೈಡ್ ಅನ್ನು ನೈಸರ್ಗಿಕವಾಗಿ ಉತ್ಪಾದಿಸುತ್ತದೆ. ನಿಮಗೆ ವಯಸ್ಸಾಗುತ್ತಿರುವಂತೆ ಇದರ ಉತ್ಪಾದನೆಯು ಹೆಚ್ಚಾಗುತ್ತದೆ. ಇದರಿಂದಾಗಿ ಕೂದಲು ಬಿಳಿಯಾಗುತ್ತದೆ.  ಮನೆಯಲ್ಲಿಯೇ ಕೆಲವು ವಸ್ತುಗಳನ್ನು ಬಳಸಿಕೊಂಡು ಬಿಳಿ ಕೂದಲನ್ನು ತಡೆಗಟ್ಟಬಹುದು.  ಒಂದು ಹಿಡಿ ಕರಿಬೇವಿನ ಎಲೆಗಳನ್ನು ತೆಗೆದುಕೊಂಡು ಅದನ್ನು ನೀರಿನಲ್ಲಿ ನೆನಸಿಡಿ.
ನೀರಿನಿಂದ ತೆಗೆದ ಬಳಿಕ ಬಿಸಿಲಿನಲ್ಲಿ ಅದು ಕಂದು ಬಣ್ಣಕ್ಕೆ ಬರುವ ತನಕ ಮತ್ತು ಗರಿಗರಿ ಆಗುವ ತನಕ ಒಣಗಿಸಿ.
ಣಗಿದ ಎಲೆಗಳನ್ನು ಸರಿಯಾಗಿ ಪುಡಿ ಮಾಡಿಕೊಳ್ಳಿ.
ಪಾತ್ರೆಯಲ್ಲಿತೆಂಗಿನ ಎಣ್ಣೆಯನ್ನು ಬಿಸಿ ಮಾಡಿಕೊಳ್ಳಿ.
ಅದಕ್ಕೆ ನಾಲ್ಕು ಚಮಚ ಕರಿಬೇವಿನ ಪುಡಿಯನ್ನು ಹಾಕಿ.
ಕೊಬ್ಬರಿ ಎಣ್ಣೆಯನ್ನು ಚೆನ್ನಾಗಿ ಕುದಿಯಲಿ.
ಎಣ್ಣೆಯನ್ನು ತಣ್ಣಗಾಗಲು ಬಿಟ್ಟು ನಂತರ ಇದನ್ನು ಒಂದು ಬಾಟಲಿಗೆ ಹಾಕಿ ಗಟ್ಟಿಯಾಗಿ ಮುಚ್ಚಳ ಮುಚ್ಚಿಡಿ.
ಇದನ್ನು ಬೇಕಾದಾಗ ತೆಗೆದು ಬಳಸಿಕೊಳ್ಳಿ. ಇದನ್ನು ಒಂದು ವಾರ ಕಾಲ ಬಳಸಿದಾಗ ಕೂದಲು ಕಪ್ಪಗಾಗುತ್ತದೆ.
ಎದೆಬಡಿತ ನಿಲ್ಲುವ ಮುನ್ನ ಹೃದಯದ ಪಿಸುಮಾತನ್ನು ಆಲಿಸಿ!
ಹೃದಯ ಸಮಸ್ಯೆ
ಯೌವ್ವನದಲ್ಲಿ ಹೆಚ್ಚು ಫಾಸ್ಟ್ ಫುಡ್ ಸೇವಿಸಬಹುದು, ಜೀವನ ಶೈಲಿ ಕ್ರಮಬದ್ಧವಾಗಿಲ್ಲದಿದ್ದರೂ ನಡೆಯುತದೆ, ಹೃದಯ ಸಮಸ್ಯೆಗಳು ಎದುರಾಗಲು  20-30 ತುಂಬಾ ಸಣ್ಣ ವಯಸ್ಸು ಎಂದೆಲ್ಲಾ ಭಾವಿಸುವವರಿಗೆ ಇಲ್ಲೊಂದು ಎಚ್ಚರಿಕೆ ಇದೆ. ಅದೇನೆಂದರೆ ಹೃದಯ ಸಮಸ್ಯೆ ಎದುರಾಗಲು ವಯಸ್ಸು ಅಡ್ಡ ಬರುವುದಿಲ್ಲ ಎನ್ನುತ್ತಿದೆ ಹೊಸ ಸಂಶೋಧನೆ.
ವಯಸ್ಸಾದವರಿಗೆ ಮಾತ್ರ ಹೃದಯ ಸಮಸ್ಯೆ ಕಾಣಿಸಿಕೊಳ್ಳುವುದು ಎಂಬ ತಪ್ಪು ಕಲ್ಪನೆಯನ್ನು ತೆಗೆದುಹಾಕಬೇಕು, ಏಕೆಂದರೆ ಯುವಕರಲ್ಲಿಯೂ ಹೃದಯ ಸಮಸ್ಯೆ ಕಾಣಿಸಿಕೊಳ್ಳುವುದು ಹೆಚ್ಚುತ್ತಿದೆ, 29-50 ವಯಸ್ಸಿನ ವ್ಯಕ್ತಿಗಳಲ್ಲಿ ಹೃದಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ಎಂದು ಸಂಶೋಧನೆ ಹೇಳಿದೆ.
30 ಹಾಗೂ ಅದಕ್ಕಿಂತ ಕಡಿಮೆ ವಯಸ್ಸಿಗಿಂತ 900 ಭಾರತೀಯರಿಗೆ ಪ್ರತಿದಿನವೂ ಹೃದಯಾಘಾತವಾಗುತ್ತಿದೆ ಎಂದು ಈ ಅಧ್ಯಯನ ವರದಿ ತಿಳಿಸಿದೆ. ಅಷ್ಟೇ ಅಲ್ಲದೇ 2015 ರಲ್ಲಿ 3.5 ಲಕ್ಷ ರೋಗಿಗಳು ಹೃದಯ ಸಮಸ್ಯೆಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ, ಈ ಪೈಕಿ ಪ್ರತಿ 10 ರಲ್ಲಿ ಒಬ್ಬರು 40 ಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದರು ಎಂಬ ಅಂಶ ಬಹಿರಂಗವಾಗಿದೆ. ಈ ಪೈಕಿ ಬಹುತೇಕರಿಗೆ ಕೊರೋನರಿ ರಕ್ತನಾಳದಲ್ಲಿ ಉಂಟಾಗುವ ಬ್ಲಾಕೇಜ್ ನಿಂದ ಹೃದಯಾಘಾತ ಸಂಭವಿಸುತ್ತದೆ ಎಂದು ಅಧ್ಯಯನ ವರದಿ ಬಹಿರಂಗಪಡಿಸಿದೆ.
ಹೃದಯ ಸ್ನಾಯುವಿನ ಊತದಿಂದ ಉಂಟಾಗುತ್ತಿರುವ ಸಾವಿನ ಸಂಖ್ಯೆಯೂ ಹೆಚ್ಚುತಿದ್ದು. ಗ್ರಾಮೀಣ ಪ್ರದೇಶದಲ್ಲಿ ಬದುಕುತ್ತಿರುವ ಜನರಿಗಿಂತ ನಗರ ಪ್ರದೇಶಗಳಲ್ಲಿ ಬದುಕುತ್ತಿರುವ ಜನರಿಗೆ ಹೃದಯಾಘಾತದ ಅಪಾಯ ಮೂರು ಪಟ್ಟು ಹೆಚ್ಚಿರುತ್ತದೆ ಎಂದು ಅಧ್ಯಯನ ವರದಿ ಎಚ್ಚರಿಕೆ ನೀಡಿದೆ.
ಕಡಿಮೆ ವ್ಯಾಯಾಮ, ಹೆಚ್ಚಿನ ಜಂಕ್ ಫುಡ್ ಸೇವನೆ, ಧೂಮಪಾನ, ಕಚೆರಿಯಲ್ಲಿನ ಒತ್ತಡಗಳು ಹೃದಯಾಘಾತ ಸಂಭವಿಸುವುದಕ್ಕೆ ಪ್ರಮುಖ ಕಾರಣವಾಗಿದ್ದು, ಮಹಿಳೆಯರಿಗಿಂತ ಪುರುಷರಲ್ಲಿಯೇ ಈ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಿದೆ, ಕ್ರಮಬದ್ಧವಾದ ಜೀವನ ಶೈಲಿ, ಹಣ್ಣು ತರಕಾರಿಗಳಂತಹ ಉತ್ತಮ ಆಹಾರ ಸೇವನೆ, ನಿಯಮಿತ ತಪಾಸಣೆಗಳಿಂದ ಯುವಕರು ಹೃದಯ ಸಮಸ್ಯೆಯನ್ನು ದೂರವಿಡಬಹುದು ಎಂದು ಅಧ್ಯಯನ ವರದಿ ಸಲಹೆ ನೀಡಿ
ಮನೆಯಲ್ಲೇ ಮೊಡವೆಗಳಿಗೆ ಔಷಧಿ
೧. ಮೆಣಸನ್ನು ನೀರಿನಲ್ಲಿ ತೇಯ್ದು ಮೊಡವೆಗಳಿಗೆ ಹಚ್ಚುತ್ತಾ ಬಂದರೆ ಕೆಲವೇ ದಿನಗಳಲ್ಲಿ ಮೊಡವೆಗಳು ಮುಖದಲ್ಲಿ ಇಲ್ಲದಂತಾಗುವುದು.
೨. ಕೊತ್ತಂಬರಿಸೊಪ್ಪಿನ ರಸದೊಂದಿಗೆ ನಿಂಬೆರಸ ಮಿಶ್ರ ಮಾಡಿ, ಕ್ರಮವಾಗಿ ಹಚ್ಚುತ್ತಿದ್ದರೆ ಮೊಡವೆ ಹಾಗೂ ಚರ್ಮದ ಮೇಲಿನ ಕಲೆಗಳು ಕಣ್ಮರೆ ಆಗುವುವು.
೩. ಬಾದಾಮಿ ಬೀಜಗಳನ್ನು ಶುದ್ಧವಾದ ಹಸುವಿನ ಹಾಲಿನಲ್ಲಿ ಅರೆದು, ಹತ್ತಿಯೊಂದಿಗೆ ಆ ಮಿಶ್ರಣವನ್ನು ಅದ್ದಿ ಮೊಡವೆಯ ಮೇಲೆ ಸವರುತ್ತಿದ್ದರೆ ಮೊಡವೆಯ ಗುರುತು ಮಾಯವಾಗುವುದು.
೪. ಸೇಬಿನ ಹಾಗೂ ನಿಂಬೆಯ ಸಿಪ್ಪೆಯನ್ನು ಬಿಸಿಲಿನಲ್ಲಿ ಒಣಗಿಸಿ ನುಣ್ಣಗೆ ಅರೆದು ಪುಡಿ ಮಾಡಿ ಚೂರ್ಣವನ್ನು ಹಾಲಿನಲ್ಲಿ ಬೆರೆಸಿ ಮೊಡವೆಗಳಿಗೆ ಹಚ್ಚಿದರೆ ಶೀಘ್ಹ್ರದಲ್ಲಿಯೇ ಮೊಡವೆಯ ಗುಳ್ಳೆ ಕರಗುವುದು.
೫. ಸೇಬಿನ ತಿರುಳನ್ನು ಅರೆದು ಮುಖಕ್ಕೆ ಲೇಪಿಸಿಕೊಳ್ಳುವುದರಿಂದ ವಾರದ ಒಳಗಾಗಿ ಮೊಡವೆ ಗುಳ್ಳೆಗಳು ಮಾಯ ಆಗುವುವು. ಜೊತೆಗೆ ಮುಖ ಕಾಂತಿ ಹೆಚ್ಚುವುದು.
೬. ಎಳೆನೀರಿನಲ್ಲಿ ಕೆಲವು ವಾರ ಮುಖ ತೊಳೆಯುತ್ತಿದ್ದರೆ ಮೊಡವೆಗಳು ಮಾಗುತ್ತವೆ. ಮುಖದ ಮೇಲೆ ಕಪ್ಪು ಕಲೆಗಳಿದ್ದರೆ ಮಾಯ ಆಗುವುವು. ಮುಖದ ಮೇಲೆ ಹೊಳಪು ಹೆಚ್ಚುವುದು.
೭. ಕಿತ್ತಲೆ ಸಿಪ್ಪೆಯನ್ನು ಮುಖದಮೇಲೆ ಉಜ್ಜುತ್ತಿದ್ದರೆ ಅದರಿಂದ ಸುವಾಸನೆಯ ದ್ರವ ಹೊರಬಂದು ಮೊಡವೆ ಗುಳ್ಳೆಗಳು ಒಣಗುವುವು.
೮. ನಿಂಬೇರಸದಲ್ಲಿ ದಾಲ್ಚಿನ್ನಿಯನ್ನು ತೇಯ್ದು ಮೊಡವೆಗಳಿಗೆ ಹಚ್ಚಿದರೆ ಬೇಗ ಒಣಗುವುವು.
೯. ಗರಿಕೆ ಹುಲ್ಲಿನ ರಸವನ್ನು ಮುಖದಮೇಲೆ ಲೇಪಿಸುವುದರಿಂದ ಮೊಡವೆಗಳು ಮಾಗುವುವು.
೧೦. ಹಿಂಗನ್ನು ನೀರಿನಲ್ಲಿ ತೇಯ್ದು ಮೊಡವೆಗಳಿಗೆ ಹಚ್ಚುತ್ತಿದ್ದರೂ ಸಹಾ ಮೊಡವೆ ಗುಳ್ಳೆಗಳು ಮುಖದ ಮೇಲೆ ಕಾಣದಂತಾಗುವುದು.
ಇದಕ್ಕಿಂತ ಮುಖ್ಯವಾಗಿ ಈ ಯಾವುದೇ ಚರ್ಮ ರೋಗಗಳು ಬರುವುದು ಹೊಟ್ಟೆಯೊಳಗಿಂದ. ಹೊಟ್ಟೆ ಶುದ್ಧ ಆಗಿದ್ದರೆ ಯಾವುದೇ ತರಹದ ಚರ್ಮ ರೋಗಗಳು ಬರುವುದಿಲ್ಲ. ಇದಕ್ಕಾಗಿ ತಿಂಗಳಿಗೆ ಒಂದು ಸಲ ಭೇದಿ ಮಾತ್ರೆಯನ್ನು ತೆಗೆದುಕೊಳ್ಳಬೇಕು. ಇಲ್ಲದಿದ್ದ ಪಕ್ಷದಲ್ಲಿ ಹೊಟ್ಟುಳ್ಳ ಧಾನ್ಯಗಳನ್ನು ಸೇವಿಸಬೇಕು. ನಮ್ಮ ದೇಹವೂ ಸಹಾ ನಮ್ಮ ಮನೆಯಲ್ಲಿರುವ ಚರಂಡಿಯಂತೆ. ಮನೆಯಲ್ಲಿರುವ ಚರಂಡಿಗೆ ಏನೇನೊ ಹಾಕಿದರೆ ಹೇಗೆ ಮನೆಯೆಲ್ಲಾ ಹಾಳಾಗುತ್ತದೋ, ಅದೇ ರೀತಿ ನಮ್ಮ ದೇಹದ ಚರಂಡಿ ಕೂಡ. ಎಣ್ಣೆಯಲ್ಲಿ ಕರಿದ ತಿಂಡಿಗಳು, ಮೈದಾ ಹಿಟ್ಟಿನಿಂದ ಮಾಡಿದ ಸಿಹಿ ತಿಂಡಿಗಳು ಮತ್ತು ಕರಿದ ತಿಂಡಿಗಳು, ಮೈದಾ ದೋಸೆ, ಮೈದಾ ಬ್ರೆಡ್ ಇತ್ಯಾದಿಗಳನ್ನು ತಿಂದರೆ ಹೊರಗಿನ ಯಾವ ಔಷಢಿಗಳಿಗೂ ಈ ರೋಗಗಳು ವಾಸಿಯಾಗುವುದಿಲ್ಲ. ವೃಥಾ ಹಣ ಪೋಲು.
ಬಹಳಷ್ಟು ಮಂದಿಗೆ ಬಸ್ ಪ್ರಯಾಣ ಅಂದ್ರೆ ಆಗಲ್ಲ.. ಬಸ್ ನಲ್ಲಿ ಪ್ರಯಾಣಿಸುವಾಗ ವಾಂತಿ ಬರುವಂತಾಗುವುದು, ಹೊಟ್ಟೆ ತೊಳೆಸಿದ ಅನುಭವ ಆಗುತ್ತದೆ. ಇದರಿಂದ ವಾಂತಿಯೂ ಆಗುತ್ತದೆ. ಹೆಚ್ಚಾಗಿ ತಿರುಪತಿಯಂತಹ ಬೆಟ್ಟ ಹತ್ತುವಾಗ, ಶಿರಾಡಿ ಘಾಟ್ ನಂತಹ ರಸ್ತೆಗಳಲ್ಲಿ ಸಂಚರಿಸುವಾಗ ಈ ಸಮಸ್ಯೆ ಹೆಚ್ಚಾಗಿರುತ್ತದೆ. ಈ ರೀತಿ ಬಹಳಷ್ಟು ಮಂದಿಗೆ ಪ್ರಯಾಣದಲ್ಲಿ ವಾಂತಿ ಆಗುತ್ತಿರುತ್ತದೆ. ಅಂತಹವರು ಪ್ರಯಾಣಕ್ಕೆ ಮುನ್ನ ಕೆಲವೊಂದು ಸೂಚನೆಗಳನ್ನು ಪಾಲಿಸಿದರೆ ಈ ಸಮಸ್ಯೆಯಿಂದ ಹೊರಬೀಳಬಹುದು…
ಸಣ್ಣ ಶುಂಠಿ ಚೂರನ್ನು ದವಡೆಯಲ್ಲಿಟ್ಟುಕೊಂಡರೆ ವಾಂತಿಯಾಗುವ ಅವಕಾಶ ಕಡಿಮೆಯಾಗುತ್ತದೆ. ಶುಂಠಿಯಲ್ಲಿನ ಕ್ಯಾಲ್ಸಿಯಂ, ಪಾಸ್ಪರಸ್, ಐರನ್, ಮೆಗ್ನಿಷಿಯಂ, ಕಾಪರ್, ಜಿಂಕ್ ನಂತಹವು ನಮ್ಮ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು.
ಅಡಿಕೆ ಚೂರನ್ನು ಚಪ್ಪರಿಸಿದರು ಈ ಸಮಸ್ಯೆಯಿಂದ ಪಾರಾಗಬಹುದು.
ನಿಂಬೆಹಣ್ಣನ್ನು ಮೂಗಿನ ಬಳಿ ಇಟ್ಟುಕೊಂಡು ವಾಸನೆಯನ್ನು ಆಘ್ರಾಣಿಸುತ್ತಿದ್ದರೂ ಈ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳಬಹುದು.
ಲವಂಗ, ಸೋಂಪನ್ನು ದವಡೆಯಲ್ಲಿಟ್ಟುಕೊಂಡು ಚಪ್ಪರಿಸುತ್ತಿದ್ದರು ವಾಮಿಟಿಂಗ್ ಸೆನ್ಸೇಷನ್ ಕಡಿಮೆಯಾಗುತ್ತದೆ…
ಮುಖ್ಯವಾಗಿ ಬಸ್ ನಲ್ಲಾಗಲಿ, ಕಾರಿನಲ್ಲಾಗಲಿ ಪ್ರಯಾಣಿಸುವಾಗ ಮುಂದಿನ ಸೀಟ್ ನಲ್ಲಿ ಕುಳಿತು ನಮ್ಮ ದೃಷ್ಟಿಯನ್ನು ನೇರವಾಗಿ ನೋಡಿದರು ವಾಮಿಟಿಂಗ್ ಸೆನ್ಸೇಷನ್ ನಿಂದ ತಪ್ಪಿಸಿಕೊಳ್ಳಬಹುದು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ