*ಪುರಾಣಗಳ ಪ್ರಕಾರ ಮಹಿಳೆಯರು ಮಾಡಬಾರದ ಕೆಲಸಗಳು*!
ನಮ್ಮ ಪುರಾಣಗಳಲ್ಲಿ ಆಚಾರ ವಿಚಾರ ಸಂಪ್ರದಾಯಗಳನ್ನು ಹೇಗೆ ಪಾಲಿಸಬೇಕು, ಏನು ಮಾಡಿದರೆ ಏನು ಪ್ರಯೋಜನವಾಗುತ್ತದೆ ಎಂಬಂತಹ ಸಂಗತಿಗಳನ್ನು ಹೇಳಲಾಗಿದೆ. ಅದೇ ರೀತಿ ಮಹಿಳೆಯರಿಗೂ ಸಾಕಷ್ಟು ಸೂಚನೆಗಳು ಪುರಾಣಗಳಲ್ಲಿ ಸಿಗುತ್ತವೆ. ಮುಖ್ಯವಾಗಿ ಮಹಿಳೆಯರು ಮಾಡಬಹುದಾದ; ಮಾಡಬಾರದ ಕೆಲಸಗಳು ಯಾವುದು ಎಂಬ ಬಗ್ಗೆ ಉಲ್ಲೇಖಿಸಲಾಗಿದೆ. ಹಾಗಿದ್ದರೆ ಅವುಗಳಲ್ಲಿ ಕೆಲವೊಂದು ನೋಡೋಣ …....
1)ಮಹಿಳೆಯರು ಯಾವುದೇ ಕಾರಣಕ್ಕೂ ಕುಂಬಳಕಾಯಿ ಹೊಡೆಯಬಾರದು.
2)ದಿಂಬಿನ ಮೇಲೆ ಕೂರಬಾರದು.
3)ದುಃಖ ವಿಚಾರಿಸಲು ಬಂದವರನ್ನು ಆಹ್ವಾನಿಸಬಾರದು ಅದೇ ರೀತಿ ಅವರು ಹೋಗುವಾಗ ಹೋಗಿಬರುತ್ತೇನೆ ಎಂದು ಹೇಳಬಾರದು. ಈ ನಡುವೆ ದುಃಖ ವಿಚಾರಿಸಲು ಬಂದವರನ್ನು ಬನ್ನಿ ಬನ್ನಿ ಎಂದು ಆಹ್ವಾನಿಸಿ ಸ್ಥಳ ಕೊಟ್ಟು ಕೂರಿಸಿ ಕಾಫಿ ಕೊಟ್ಟು ತುಂಬಾ ಅತಿಥಿ ಮರ್ಯಾದೆಗಳನ್ನು ಮಾಡುತ್ತಿದ್ದಾರೆ. ಪರೋಕ್ಷವಾಗಿ ನಾವು ಅಶುಭವನ್ನು ಕೋರಿಕೊಳ್ಳಲು ಇದು ನಾಂದಿ ಆಗುತ್ತದೆ..
4)ಹೊಸ ಬಟ್ಟೆಗಳನ್ನು ಧರಿಸುವ ಮೊದಲು ಅದಕ್ಕೆ ಸ್ವಲ್ಪ ಅರಿಶಿಣವನ್ನು ಯಾವುದಾದರೂ ಒಂದು ಮೂಲೆಯಲ್ಲಿ ಹಚ್ಚಬೇಕು.
5)ಒಬ್ಬರು ಧರಿಸಿದ ಹೂವನ್ನು ಇನ್ನೊಬ್ಬರು ಧರಿಸಬಾರದು. ಆದರೆ ಇತ್ತೀಚಿನ ದಿನಗಳಲ್ಲಿ ಈ ಕೆಲಸ ಬಹಳಷ್ಟು ಕಡೆ ಸಹಜವಾಗಿದೆ.
6)ಕಪ್ಪು ವರ್ಣದ ಬಟ್ಟೆಗಳನ್ನು ಧರಿಸಬೇಡಿ.
7)ಉಪ್ಪು, ಹುಣಸೆಹಣ್ಣು ಇವುಗಳನ್ನು ಯಾರಿಗೆ ಕೊಟ್ಟರೂ ಕೈಗೆ ಕೊಡಬಾರದು. ಕೆಳಗೆ ಇಡಿ ಅವರೇ ತೆಗೆದುಕೊಳ್ಳುತ್ತಾರೆ.
8)ಪ್ರತಿನಿತ್ಯ ಊಟಕ್ಕೂ ಮುನ್ನ ಕಾಗೆಗೆ ಅನ್ನ ಇಡಿ. ಕಾಗೆಗೆ ದನಗಳಿಗೆ ನಾವು ಊಟ ಮಾಡುವ ಮುನ್ನ, ನಾಯಿ, ಬೆಕ್ಕಿಗೆ ಊಟ ಮಾಡಿದ ಬಳಿಕ ಅನ್ನ ಇಡಿ.
9) ಒಡೆದ ತೆಂಗಿನ ಕಾಯಿ ನೀಡುವಾಗ ಮೂರು ಕಣ್ಣು ಇರುವ ಭಾಗವನ್ನು ನೀವು ಇಟ್ಟುಕೊಂಡು ಉಳಿದ ಭಾಗವನ್ನು ಇತರರಿಗೆ ಕೊಡಬೇಕು.
10)ಕಾಲಿನ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವುದು, ಕಾಲು ಅಲುಗಾಡಿಸುತ್ತಾ ಕೂರುವುದು, ಒಂಟಿಕಾಲಿನಲ್ಲಿ ನಿಲ್ಲುವುದು ಮಾಡಬಾರದು. ಇದರಿಂದ ದರಿದ್ರ ಉಂಟಾಗುತ್ತದೆ.
10)ಸುಮಂಗಲಿ ಸ್ತ್ರೀಯರು ಮುನಿಸಿಕೊಂಡು ರಾತ್ರಿ ಹೊತ್ತು ಊಟ ಮಾಡದೆ ಮಲಗಬಾರದು.
11)ಹೂಗಳನ್ನು ಬಾಗಿಲ ಬಳಿ ಮಾರಾಟ ಮಾಡಲು ಬಂದಾಗ ಬೇಡ ಎನ್ನಬಾರದು. ಅದಕ್ಕೆ ಬದಲಾಗಿ ನಾಳೆ ತೆಗೆದುಕೊಳ್ಳುತ್ತೇನೆ ಎಂದು ಹೇಳಬೇಕು.
12)ಯಾವಾಗಲೂ ನಮ್ಮ ಬಾಯಲ್ಲಿ ಪೀಡೆ, ದರಿದ್ರ, ಶನಿ, ಕಷ್ಟ ಎಂಬ ಪದಗಳನ್ನು ಜಾಸ್ತಿ ಉಪಯೋಗಿಸಬಾರದು.
ಮನೆಯಲ್ಲಿ ಧೂಳು, ಕಸ, ಜೇಡರ ಬಲೆ ಕಟ್ಟುವುದು ದರಿದ್ರ. ಹತ್ತು ದಿನಗಳಿಗೆ ಒಮ್ಮೆ ಮಂಗಳ ಶುಕ್ರವಾರ ಅಲ್ಲದೆ ಬೇರೆ ದಿನಗಳಲ್ಲಿ ಧೂಳು, ಗೂಡುಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು.
ಮನೆಯಲ್ಲಿ ಧೂಳು, ಕಸ, ಜೇಡರ ಬಲೆ ಕಟ್ಟುವುದು ದರಿದ್ರ. ಹತ್ತು ದಿನಗಳಿಗೆ ಒಮ್ಮೆ ಮಂಗಳ ಶುಕ್ರವಾರ ಅಲ್ಲದೆ ಬೇರೆ ದಿನಗಳಲ್ಲಿ ಧೂಳು, ಗೂಡುಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು.
13)ಶ್ರಾದ್ಧ ದಿನಗದಂದು ಮನೆಯ ಮುಂದೆ ರಂಗೋಲಿ ಹಾಕಬಾರದು.
14)ದಿಂಬಿನ ಕವರ್, ಬೆಡ್ ಶೀಟ್ಗಳನ್ನು ಆಗಾಗ ಹೊಗೆಯುತ್ತಿರಬೇಕು. ಇವುಗಳಲ್ಲಿ ನಮಗೆ ಗೊತ್ತಿಲ್ಲದ ಸೂಕ್ಷ್ಮಿ ಕ್ರಿಮಿಗಳು ಸಾಕಷ್ಟು ಇರುತ್ತವೆ. ಇದರಿಂದ ನಮಗೆ ಹಾನಿಯುಂಟಾಗುತ್ತದೆ.
15)ಒಳ್ಳೆಯ ಕೆಲಸಗಳನ್ನು ಶುಕ್ಲಪಕ್ಷದಿಂದ ಅಂದರೆ ಅಮಾವಾಸ್ಯೆಯಿಂದ ಹುಣ್ಣಿಮೆ ತನಕ ಮಾಡಬೇಕು.
16)ಮಹಿಳೆಯರು ಮುಟ್ಟಾದಾಗ ಹೂವನ್ನು ಇಟ್ಟುಕೊಳ್ಳಬಾರದು.
17)ಮಹಿಳೆಯರು ಯಾವಾಗಲೂ ಕೂದಲು ಬಿಟ್ಟುಕೊಂಡು ಇರಬಾರದು. ಇದು ಜ್ಯೇಷ್ಠಾದೇವಿ ಸ್ವರೂಪ. ಮನೆಯಲ್ಲಿ ಮಂಗಳ ಕಾರ್ಯಗಳು ನಡೆಯಲು ವಿಘ್ನವಾಗುತ್ತದೆ.
ಸಂಗ್ರಹ
ಸಂಗ್ರಹ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ